<p><strong>ನವದೆಹಲಿ:</strong>ವೈದ್ಯಕೀಯ ಕಾಲೇಜು ಗಳ ಅಖಿಲ ಭಾರತ ಕೋಟಾದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್)ಶೇ 10ರಷ್ಟು ಮೀಸಲಾತಿ ನೀಡುವ ಮುನ್ನ ಸುಪ್ರೀಂ ಕೋರ್ಟ್ನ ಅನು ಮತಿಯನ್ನು ಕೇಂದ್ರವು ಪಡೆದುಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಪಡಿಸಿದೆ.</p>.<p>ಹೈಕೋರ್ಟ್ ಆಗಸ್ಟ್ 25ರಂದು ನೀಡಿದ್ದ ಪೂರ್ಣ ಆದೇಶವನ್ನು ರದ್ದು ಮಾಡುವುದಿಲ್ಲ. ಮೀಸಲಾತಿ ನೀಡಿಕೆಗೆ ಮುನ್ನ ಸುಪ್ರೀಂ ಕೋರ್ಟ್ನ ಅನುಮತಿ ಪಡೆದುಕೊಳ್ಳಬೇಕು ಎಂಬ ಅಂಶವನ್ನು ಮಾತ್ರ ರದ್ದು ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಸ್ಪಷ್ಟಪಡಿಸಿದೆ.</p>.<p>ತಮಿಳುನಾಡಿನ ಅಡಳಿತಾ ರೂಢ ಡಿಎಂಕೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತ ಪಡಿ ಸುವ ಅಗತ್ಯ ಇರಲಿಲ್ಲ. ಹೈಕೋರ್ಟ್ ವ್ಯಾಪ್ತಿ ಮೀರಿ ವರ್ತಿಸಿದೆ.ನ್ಯಾಯಾಂಗ ನಿಂದನೆಯ ಅರ್ಜಿ ಪರಿಶೀಲಿಸುವಾಗ ಆದೇಶದ ಪಾಲನೆ ಆಗಿದೆಯೇ ಇಲ್ಲವೇ ಎಂಬುದನ್ನು ಮಾತ್ರನೋಡಬೇಕು ಎಂದು ಪೀಠವು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ವೈದ್ಯಕೀಯ ಕಾಲೇಜು ಗಳ ಅಖಿಲ ಭಾರತ ಕೋಟಾದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್)ಶೇ 10ರಷ್ಟು ಮೀಸಲಾತಿ ನೀಡುವ ಮುನ್ನ ಸುಪ್ರೀಂ ಕೋರ್ಟ್ನ ಅನು ಮತಿಯನ್ನು ಕೇಂದ್ರವು ಪಡೆದುಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಪಡಿಸಿದೆ.</p>.<p>ಹೈಕೋರ್ಟ್ ಆಗಸ್ಟ್ 25ರಂದು ನೀಡಿದ್ದ ಪೂರ್ಣ ಆದೇಶವನ್ನು ರದ್ದು ಮಾಡುವುದಿಲ್ಲ. ಮೀಸಲಾತಿ ನೀಡಿಕೆಗೆ ಮುನ್ನ ಸುಪ್ರೀಂ ಕೋರ್ಟ್ನ ಅನುಮತಿ ಪಡೆದುಕೊಳ್ಳಬೇಕು ಎಂಬ ಅಂಶವನ್ನು ಮಾತ್ರ ರದ್ದು ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಸ್ಪಷ್ಟಪಡಿಸಿದೆ.</p>.<p>ತಮಿಳುನಾಡಿನ ಅಡಳಿತಾ ರೂಢ ಡಿಎಂಕೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತ ಪಡಿ ಸುವ ಅಗತ್ಯ ಇರಲಿಲ್ಲ. ಹೈಕೋರ್ಟ್ ವ್ಯಾಪ್ತಿ ಮೀರಿ ವರ್ತಿಸಿದೆ.ನ್ಯಾಯಾಂಗ ನಿಂದನೆಯ ಅರ್ಜಿ ಪರಿಶೀಲಿಸುವಾಗ ಆದೇಶದ ಪಾಲನೆ ಆಗಿದೆಯೇ ಇಲ್ಲವೇ ಎಂಬುದನ್ನು ಮಾತ್ರನೋಡಬೇಕು ಎಂದು ಪೀಠವು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>