ಪಶ್ಚಿಮ ಬರ್ಧಾಮನ್ ಜಿಲ್ಲೆಯಲ್ಲಿ ಡಿಸೆಂಬರ್ನಲ್ಲಿ ನಡೆದಿದ್ದ ‘ಹೊದಿಕೆ ವಿತರಣೆ ಕಾರ್ಯಕ್ರಮದ’ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾಗಿದ್ದ ಅರ್ಜಿ ಇದಾಗಿದ್ದು, ಈ ಪ್ರಕರಣ ಕುರಿತು ಕೋಲ್ಕತ್ತ ಹೈಕೋರ್ಟ್ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರಿದ್ದ ಪೀಠವು ಬಿರ್ಬಾಹ ಅವರಿಗೆ ಹೇಳಿದೆ. ಈ ಪ್ರಕರಣವು ಸುಪ್ರೀಂ ಕೋರ್ಟ್ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೀಠ ತಿಳಿಸಿದೆ.