<p><strong>ನವದೆಹಲಿ: </strong>ಪ್ರಕರಣಗಳ ವಿಚಾರಣೆ ಪ್ರಕ್ರಿಯೆ ದೀರ್ಘವಾಗದಂತೆ ಖಾತ್ರಿಪಡಿಸುವುದು ವಿಚಾರಣಾ ನ್ಯಾಯಾಲಯಗಳ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಎಂ.ಎಂ.ಸುಂದ್ರೇಶ್ ಅವರಿದ್ದ ನ್ಯಾಯಪೀಠವು, ಯಾವುದೇ ಕಕ್ಷಿದಾರರು ವಿಳಂಬ ತಂತ್ರ ಅನುಸರಿಸುವುದನ್ನು ತಡೆಗಟ್ಟಬೇಕು ಎಂದೂ ಸೂಚಿಸಿತು.</p>.<p>ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೇಯರ್ವೊಬ್ಬರ ಕೊಲೆ ಮಾಡಿದವರು ತಪ್ಪಿಸಿಕೊಳ್ಳಲು ನೆರವಾದ ಆರೋಪ ಎದುರಿಸುತ್ತಿದ್ದ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಸೂಚನೆ ನೀಡಿತು.</p>.<p><a href="https://www.prajavani.net/india-news/supreme-court-to-high-courts-serve-notice-to-accused-before-enhancing-sentence-964590.html" itemprop="url">ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಮುನ್ನ ಆಪಾದಿತರಿಗೆ ನೋಟಿಸ್ ನೀಡಬೇಕು: ಸುಪ್ರೀಂ </a></p>.<p>ಸಾಕ್ಷಿಗಳ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಮಯ ಕಳೆದಂತೆ ಸಾಕ್ಷಿಗಳಿಂದ ಹೇಳಿಕೆ ಪಡೆಯುವ ಪ್ರಕ್ರಿಯೆಯಲ್ಲಿ ಸಾಕಷ್ಟು ಸಮಸ್ಯೆಗಳುಂಟಾಗುತ್ತವೆ ಎಂದು ಹೇಳಿತು.</p>.<p>‘ವ್ಯಕ್ತಿಯು ಕಳೆದ ಏಳು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ, ಪ್ರಾಸಿಕ್ಯೂಷನ್ನಿಂದ ಸಾಕ್ಷಿಗಳಿಂದ ಹೇಳಿಕೆ ಪಡೆಯುವ ಪ್ರಕ್ರಿಯೆ ಇನ್ನೂ ಆರಂಭಗೊಂಡಿಲ್ಲ. ಏಳು ವರ್ಷಗಳು ಗತಿಸಿದ್ದರೂ ವಿಚಾರಣೆಯೇ ಆರಂಭವಾಗಿಲ್ಲ ಎಂಬುದನ್ನು ತಿಳಿದು ನಮಗೆ ಅಚ್ಚರಿಯಾಗಿದೆ. ಇದು ಒಪ್ಪತಕ್ಕದ್ದಲ್ಲ’ ಎಂದು ನ್ಯಾಯಮೂರ್ತಿಗಳು ಹೇಳಿದರು.</p>.<p>ಅರ್ಜಿದಾರಗೆ ಜಾಮೀನು ಮಂಜೂರು ಮಾಡಿದ ನ್ಯಾಯಪೀಠ, ‘ಸುಪ್ರೀಂಕೋರ್ಟ್ನ ಈ ಆದೇಶ ಕೈಸೇರಿದ ದಿನದಿಂದ ಒಂದು ವರ್ಷದ ಒಳಗಾಗಿ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ನೀಡಬೇಕು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಕರಣಗಳ ವಿಚಾರಣೆ ಪ್ರಕ್ರಿಯೆ ದೀರ್ಘವಾಗದಂತೆ ಖಾತ್ರಿಪಡಿಸುವುದು ವಿಚಾರಣಾ ನ್ಯಾಯಾಲಯಗಳ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಎಂ.ಎಂ.ಸುಂದ್ರೇಶ್ ಅವರಿದ್ದ ನ್ಯಾಯಪೀಠವು, ಯಾವುದೇ ಕಕ್ಷಿದಾರರು ವಿಳಂಬ ತಂತ್ರ ಅನುಸರಿಸುವುದನ್ನು ತಡೆಗಟ್ಟಬೇಕು ಎಂದೂ ಸೂಚಿಸಿತು.</p>.<p>ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೇಯರ್ವೊಬ್ಬರ ಕೊಲೆ ಮಾಡಿದವರು ತಪ್ಪಿಸಿಕೊಳ್ಳಲು ನೆರವಾದ ಆರೋಪ ಎದುರಿಸುತ್ತಿದ್ದ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಸೂಚನೆ ನೀಡಿತು.</p>.<p><a href="https://www.prajavani.net/india-news/supreme-court-to-high-courts-serve-notice-to-accused-before-enhancing-sentence-964590.html" itemprop="url">ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಮುನ್ನ ಆಪಾದಿತರಿಗೆ ನೋಟಿಸ್ ನೀಡಬೇಕು: ಸುಪ್ರೀಂ </a></p>.<p>ಸಾಕ್ಷಿಗಳ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಮಯ ಕಳೆದಂತೆ ಸಾಕ್ಷಿಗಳಿಂದ ಹೇಳಿಕೆ ಪಡೆಯುವ ಪ್ರಕ್ರಿಯೆಯಲ್ಲಿ ಸಾಕಷ್ಟು ಸಮಸ್ಯೆಗಳುಂಟಾಗುತ್ತವೆ ಎಂದು ಹೇಳಿತು.</p>.<p>‘ವ್ಯಕ್ತಿಯು ಕಳೆದ ಏಳು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ, ಪ್ರಾಸಿಕ್ಯೂಷನ್ನಿಂದ ಸಾಕ್ಷಿಗಳಿಂದ ಹೇಳಿಕೆ ಪಡೆಯುವ ಪ್ರಕ್ರಿಯೆ ಇನ್ನೂ ಆರಂಭಗೊಂಡಿಲ್ಲ. ಏಳು ವರ್ಷಗಳು ಗತಿಸಿದ್ದರೂ ವಿಚಾರಣೆಯೇ ಆರಂಭವಾಗಿಲ್ಲ ಎಂಬುದನ್ನು ತಿಳಿದು ನಮಗೆ ಅಚ್ಚರಿಯಾಗಿದೆ. ಇದು ಒಪ್ಪತಕ್ಕದ್ದಲ್ಲ’ ಎಂದು ನ್ಯಾಯಮೂರ್ತಿಗಳು ಹೇಳಿದರು.</p>.<p>ಅರ್ಜಿದಾರಗೆ ಜಾಮೀನು ಮಂಜೂರು ಮಾಡಿದ ನ್ಯಾಯಪೀಠ, ‘ಸುಪ್ರೀಂಕೋರ್ಟ್ನ ಈ ಆದೇಶ ಕೈಸೇರಿದ ದಿನದಿಂದ ಒಂದು ವರ್ಷದ ಒಳಗಾಗಿ ವಿಚಾರಣಾ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ನೀಡಬೇಕು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>