ಯಮುನಾ ನದಿ ಸ್ವಚ್ಛಗೊಳಿಸಲು ಜುಲೈ 26,2018ರಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ, ಎನ್ಜಿಟಿ ಮಾಜಿ ಅಧ್ಯಕ್ಷ ಬಿ.ಎಸ್.ಸಜ್ವಾನ್ ಮತ್ತು ದೆಹಲಿ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಶೈಲಜಾ ಚಂದ್ರ ಅವರನ್ನೊಳಗೊಂಡ ಸಮಿತಿ ರಚಿಸಿ, ನದಿ ಸ್ವಚ್ಛತೆ ಕುರಿತು ಕ್ರಿಯಾ ಯೋಜನೆ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.