'ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ ಮತ್ತು ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಇದು ಸರಿಯಾದ ಕ್ರಮವಾಗಿದೆ. ಕೇಂದ್ರ ಸರ್ಕಾರವು ಈಗಲಾದರೂ ನಿಷ್ಠುರ ಕಾರ್ಯ ವಿಧಾನಗಳನ್ನು ನಿಲ್ಲಿಸಬೇಕು, ಅವರ ತಪ್ಪನ್ನು ಒಪ್ಪಿಕೊಂಡು ಸರಿ ಪಡಿಸಿಕೊಳ್ಳಬೇಕು' ಎಂದು ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.