<p class="title"><strong>ನವದೆಹಲಿ</strong>: ವೈಯಕ್ತಿಕ ಬಳಕೆಗಾಗಿ ಆಮದು ಮಾಡಿಕೊಳ್ಳುವ ಆಮ್ಲಜನಕ ಸಾಂದ್ರಕಗಳ ಮೇಲೆ ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಐಜಿಎಸ್ಟಿ) ವಿಧಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.</p>.<p class="title">ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಷಾ ಅವರ ವಿಶೇಷ ನ್ಯಾಯಪೀಠವು ಹೈಕೋರ್ಟ್ನಲ್ಲಿ ಈ ಕುರಿತು ಪಿಐಎಲ್ ಸಲ್ಲಿಸಿದ್ದವರಿಗೆ ಪ್ರತಿಕ್ರಿಯೆ ದಾಖಲಿಸುವಂತೆ ಸೂಚಿಸಿತು.</p>.<p class="title">‘ಮುಂದಿನ ಆದೇಶದವರೆಗೆ, ದೆಹಲಿ ಹೈಕೋರ್ಟ್ನ ಈ ಕುರಿತ ಆದೇಶಕ್ಕೆ ತಡೆ ನೀಡಲಾಗಿದೆ’ ಎಂದು ನ್ಯಾಯಪೀಠ ತಿಳಿಸಿತು.</p>.<p class="title">ಜೂನ್ 8ರಂದು ಜಿಎಸ್ಟಿ ಮಂಡಳಿ ಸಭೆ ನಡೆಯಲಿದ್ದು, ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಕೋವಿಡ್ಗೆ ಸಂಬಂಧಿಸಿದ ಅಗತ್ಯ ಸರಕುಗಳಿಗೆ ವಿನಾಯಿತಿ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ನ್ಯಾಯಪೀಠದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಈ ತಡೆಯಾಜ್ಞೆ ನೀಡಲಾಗಿದೆ.</p>.<p class="title"><a href="https://www.prajavani.net/india-news/govt-permits-supply-of-liquid-oxygen-to-certain-industries-and-projects-on-temporary-basis-835122.html" itemprop="url">ಕೈಗಾರಿಕೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಕೆಗೆ ಸರ್ಕಾರದ ಅನುಮತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ವೈಯಕ್ತಿಕ ಬಳಕೆಗಾಗಿ ಆಮದು ಮಾಡಿಕೊಳ್ಳುವ ಆಮ್ಲಜನಕ ಸಾಂದ್ರಕಗಳ ಮೇಲೆ ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಐಜಿಎಸ್ಟಿ) ವಿಧಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.</p>.<p class="title">ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಷಾ ಅವರ ವಿಶೇಷ ನ್ಯಾಯಪೀಠವು ಹೈಕೋರ್ಟ್ನಲ್ಲಿ ಈ ಕುರಿತು ಪಿಐಎಲ್ ಸಲ್ಲಿಸಿದ್ದವರಿಗೆ ಪ್ರತಿಕ್ರಿಯೆ ದಾಖಲಿಸುವಂತೆ ಸೂಚಿಸಿತು.</p>.<p class="title">‘ಮುಂದಿನ ಆದೇಶದವರೆಗೆ, ದೆಹಲಿ ಹೈಕೋರ್ಟ್ನ ಈ ಕುರಿತ ಆದೇಶಕ್ಕೆ ತಡೆ ನೀಡಲಾಗಿದೆ’ ಎಂದು ನ್ಯಾಯಪೀಠ ತಿಳಿಸಿತು.</p>.<p class="title">ಜೂನ್ 8ರಂದು ಜಿಎಸ್ಟಿ ಮಂಡಳಿ ಸಭೆ ನಡೆಯಲಿದ್ದು, ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಕೋವಿಡ್ಗೆ ಸಂಬಂಧಿಸಿದ ಅಗತ್ಯ ಸರಕುಗಳಿಗೆ ವಿನಾಯಿತಿ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ನ್ಯಾಯಪೀಠದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಈ ತಡೆಯಾಜ್ಞೆ ನೀಡಲಾಗಿದೆ.</p>.<p class="title"><a href="https://www.prajavani.net/india-news/govt-permits-supply-of-liquid-oxygen-to-certain-industries-and-projects-on-temporary-basis-835122.html" itemprop="url">ಕೈಗಾರಿಕೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಕೆಗೆ ಸರ್ಕಾರದ ಅನುಮತಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>