<p class="title"><strong>ನವದೆಹಲಿ</strong>: ಇಲ್ಲಿನ ಸರೋಜಿನಿ ನಗರ್ನಲ್ಲಿ ಇರುವ ಸುಮಾರು 200 ವಸತಿ ಟೆಂಟ್ಗಳ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.</p>.<p class="title">ಇಲ್ಲಿನ ನಿವಾಸಿ, 10ನೇ ತರಗತಿ ವಿದ್ಯಾರ್ಥಿನಿ ಪರವಾಗಿ ಹಾಜರಿದ್ದ ವಕೀಲ ವಿಕಾಸ್ ಸಿಂಗ್ ಅವರ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಹೃಷಿಕೇಷ್ ರಾಯ್ ಅವರಿದ್ದ ಪೀಠ ಈ ಆದೇಶ ನೀಡಿತು.</p>.<p class="title">ಪುನರ್ವಸತಿ ಕಾರ್ಯಕ್ರಮವಿಲ್ಲದೆ ಸಾವಿರಾರು ನಿವಾಸಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಮೇ 2ಕ್ಕೆ ವಿಚಾರಣೆ ಮುಂದೂಡಿದ ಪೀಠ, ಅಲ್ಲಿಯವರೆಗೂ ಯಾವುದೇ ಕಠಿಣ ಕ್ರಮಕೈಗೊಳ್ಳಬಾರದು ಎಂದು ಸೂಚಿಸಿತು.</p>.<p class="title">ದೆಹಲಿ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಅವಧಿ ಸೋಮವಾರ ಅಂತ್ಯಗೊಂಡಿತ್ತು. ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು, ಸರೋಜಿನಿ ನಗರ್ನಲ್ಲಿರುವ 200 ಟೆಂಟ್ಗಳ ನಿವಾಸಿಗಳಿಗೆ ವಾರದಲ್ಲಿ ತೆರವುಗೊಳ್ಳಲು ಸೂಚಿಸಿ ಏ. 4ರಂದು ನೋಟಿಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಇಲ್ಲಿನ ಸರೋಜಿನಿ ನಗರ್ನಲ್ಲಿ ಇರುವ ಸುಮಾರು 200 ವಸತಿ ಟೆಂಟ್ಗಳ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.</p>.<p class="title">ಇಲ್ಲಿನ ನಿವಾಸಿ, 10ನೇ ತರಗತಿ ವಿದ್ಯಾರ್ಥಿನಿ ಪರವಾಗಿ ಹಾಜರಿದ್ದ ವಕೀಲ ವಿಕಾಸ್ ಸಿಂಗ್ ಅವರ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಹೃಷಿಕೇಷ್ ರಾಯ್ ಅವರಿದ್ದ ಪೀಠ ಈ ಆದೇಶ ನೀಡಿತು.</p>.<p class="title">ಪುನರ್ವಸತಿ ಕಾರ್ಯಕ್ರಮವಿಲ್ಲದೆ ಸಾವಿರಾರು ನಿವಾಸಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಮೇ 2ಕ್ಕೆ ವಿಚಾರಣೆ ಮುಂದೂಡಿದ ಪೀಠ, ಅಲ್ಲಿಯವರೆಗೂ ಯಾವುದೇ ಕಠಿಣ ಕ್ರಮಕೈಗೊಳ್ಳಬಾರದು ಎಂದು ಸೂಚಿಸಿತು.</p>.<p class="title">ದೆಹಲಿ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯ ಅವಧಿ ಸೋಮವಾರ ಅಂತ್ಯಗೊಂಡಿತ್ತು. ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು, ಸರೋಜಿನಿ ನಗರ್ನಲ್ಲಿರುವ 200 ಟೆಂಟ್ಗಳ ನಿವಾಸಿಗಳಿಗೆ ವಾರದಲ್ಲಿ ತೆರವುಗೊಳ್ಳಲು ಸೂಚಿಸಿ ಏ. 4ರಂದು ನೋಟಿಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>