<p><strong>ಪಣಜಿ</strong>:ಕರ್ನಾಟಕದ ಕ್ಯಾಸಲ್ ರಾಕ್ ರೈಲು ನಿಲ್ದಾಣದಿಂದ ಗೋವಾದ ಕೊಲ್ಲೆಂ ರೈಲು ನಿಲ್ದಾಣದವರೆಗಿನ ನೈಋತ್ಯ ರೈಲ್ವೆಯ ಮಾರ್ಗವನ್ನು ಜೋಡಿ ಹಳಿ ಮಾರ್ಗವಾಗಿ ಪರಿವರ್ತಿಸುವ ವಿವಾದಾತ್ಮಕ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ನೀಡಿದ್ದ ಹಸಿರು ನಿಶಾನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.</p>.<p>ಜೋಡಿ ಹಳಿ ಮಾರ್ಗದ ಯೋಜನೆಯ ಪರಿಸರ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ನೇಮಿಸಿದ್ದ ಕೇಂದ್ರದ ಉನ್ನತಾಧಿಕಾರ ಸಮಿತಿ (ಸಿಇಸಿ) ನೀಡಿರುವ ಶಿಫಾರಸುಗಳನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</p>.<p>ಈರೈಲು ಮಾರ್ಗ ಹಾದು ಹೋಗಿರುವಪಶ್ಚಿಮ ಘಟ್ಟಗಳು ಯುನೆಸ್ಕೊ ಅನುಮೋದಿಸಿರುವ ಪರಿಸರ ಸೂಕ್ಷ್ಮ ಪ್ರದೇಶವನ್ನು ಒಳ<br />ಗೊಂಡಿದೆ.ಅಲ್ಲಿ ಹೆಚ್ಚುವರಿ ರೈಲು ಹಳಿ ಹಾದುಹೋದರೆ, ವನ್ಯಜೀವಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಿಇಸಿ ತನ್ನ ವರದಿಯಲ್ಲಿ ಹೇಳಿದೆ.</p>.<p>ರೈಲ್ವೆ ಜೋಡಿ ಹಳಿ ಯೋಜನೆಯ ಹೊರತಾಗಿ, ಗೋವಾ-ಕರ್ನಾಟಕಅರಣ್ಯದ ಗಡಿಯಲ್ಲಿ ಬರುವವಿದ್ಯುತ್ ಮಾರ್ಗ ಮತ್ತುರಾಷ್ಟ್ರೀಯ ಹೆದ್ದಾರಿ 4 ಎ ವಿಸ್ತರಣೆಯ ಎರಡು ಯೋಜನೆಗಳು ಪರಿಸರದ ಮೇಲೆ ಉಂಟುಮಾಡುವ ಪರಿಣಾಮವನ್ನು ಅಂದಾಜಿಸುವ ಹೊಣೆಯನ್ನು ಸಿಇಸಿಗೆ ವಹಿಸಲಾಗಿದೆ.</p>.<p>ಇಲ್ಲಿ ಈ ಮೂರು ಯೋಜನೆಗಳು ಜಾರಿಯಾದರೆ ಸುಮಾರು 50 ಸಾವಿರ ಮರಗಳ ಹನನವಾಗಲಿದೆ ಎಂದು ಬಿಜೆಪಿಯೇತರ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ವಾದಿಸಿ, ಯೋಜನೆಗಳ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದವು.<br />ಗೋವಾದ ಸ್ಥಳೀಯ ಗ್ರೀನ್ ಎನ್ಜಿಒ ‘ಗೋವಾ ಫೌಂಡೇಶನ್’ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ವಿಚಾರಣೆ ನಡೆಸಿತು.</p>.<p>ಗೋವಾ ಫೌಂಡೇಶನ್ನ ಕ್ಲೌಡ್ ಅಲ್ವಾರೆಸ್, ರೈಲ್ವೆಗೆ ಮರು ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಸಿಇಸಿ ಶಿಫಾರಸುಗಳನ್ನು ಸುಪ್ರೀಂಕೋರ್ಟ್ ಪರಿಗಣಿಸಿರುವುದು ಗೋವಾಕ್ಕೆ ಸಿಕ್ಕ ವಿಜಯವಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ</strong>:ಕರ್ನಾಟಕದ ಕ್ಯಾಸಲ್ ರಾಕ್ ರೈಲು ನಿಲ್ದಾಣದಿಂದ ಗೋವಾದ ಕೊಲ್ಲೆಂ ರೈಲು ನಿಲ್ದಾಣದವರೆಗಿನ ನೈಋತ್ಯ ರೈಲ್ವೆಯ ಮಾರ್ಗವನ್ನು ಜೋಡಿ ಹಳಿ ಮಾರ್ಗವಾಗಿ ಪರಿವರ್ತಿಸುವ ವಿವಾದಾತ್ಮಕ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ನೀಡಿದ್ದ ಹಸಿರು ನಿಶಾನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.</p>.<p>ಜೋಡಿ ಹಳಿ ಮಾರ್ಗದ ಯೋಜನೆಯ ಪರಿಸರ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ನೇಮಿಸಿದ್ದ ಕೇಂದ್ರದ ಉನ್ನತಾಧಿಕಾರ ಸಮಿತಿ (ಸಿಇಸಿ) ನೀಡಿರುವ ಶಿಫಾರಸುಗಳನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</p>.<p>ಈರೈಲು ಮಾರ್ಗ ಹಾದು ಹೋಗಿರುವಪಶ್ಚಿಮ ಘಟ್ಟಗಳು ಯುನೆಸ್ಕೊ ಅನುಮೋದಿಸಿರುವ ಪರಿಸರ ಸೂಕ್ಷ್ಮ ಪ್ರದೇಶವನ್ನು ಒಳ<br />ಗೊಂಡಿದೆ.ಅಲ್ಲಿ ಹೆಚ್ಚುವರಿ ರೈಲು ಹಳಿ ಹಾದುಹೋದರೆ, ವನ್ಯಜೀವಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಸಿಇಸಿ ತನ್ನ ವರದಿಯಲ್ಲಿ ಹೇಳಿದೆ.</p>.<p>ರೈಲ್ವೆ ಜೋಡಿ ಹಳಿ ಯೋಜನೆಯ ಹೊರತಾಗಿ, ಗೋವಾ-ಕರ್ನಾಟಕಅರಣ್ಯದ ಗಡಿಯಲ್ಲಿ ಬರುವವಿದ್ಯುತ್ ಮಾರ್ಗ ಮತ್ತುರಾಷ್ಟ್ರೀಯ ಹೆದ್ದಾರಿ 4 ಎ ವಿಸ್ತರಣೆಯ ಎರಡು ಯೋಜನೆಗಳು ಪರಿಸರದ ಮೇಲೆ ಉಂಟುಮಾಡುವ ಪರಿಣಾಮವನ್ನು ಅಂದಾಜಿಸುವ ಹೊಣೆಯನ್ನು ಸಿಇಸಿಗೆ ವಹಿಸಲಾಗಿದೆ.</p>.<p>ಇಲ್ಲಿ ಈ ಮೂರು ಯೋಜನೆಗಳು ಜಾರಿಯಾದರೆ ಸುಮಾರು 50 ಸಾವಿರ ಮರಗಳ ಹನನವಾಗಲಿದೆ ಎಂದು ಬಿಜೆಪಿಯೇತರ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ವಾದಿಸಿ, ಯೋಜನೆಗಳ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದವು.<br />ಗೋವಾದ ಸ್ಥಳೀಯ ಗ್ರೀನ್ ಎನ್ಜಿಒ ‘ಗೋವಾ ಫೌಂಡೇಶನ್’ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ವಿಚಾರಣೆ ನಡೆಸಿತು.</p>.<p>ಗೋವಾ ಫೌಂಡೇಶನ್ನ ಕ್ಲೌಡ್ ಅಲ್ವಾರೆಸ್, ರೈಲ್ವೆಗೆ ಮರು ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಸಿಇಸಿ ಶಿಫಾರಸುಗಳನ್ನು ಸುಪ್ರೀಂಕೋರ್ಟ್ ಪರಿಗಣಿಸಿರುವುದು ಗೋವಾಕ್ಕೆ ಸಿಕ್ಕ ವಿಜಯವಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>