ಶಿಂದೆ ಬಣ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಆಗಸ್ಟ್ 4ರಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಶಿಂದೆ ಬಣದ ಅರ್ಜಿಯ ಕುರಿತ ನೋಟಿಸ್ಗೆ ಉತ್ತರಿಸಲು ಉದ್ಧವ್ ಠಾಕ್ರೆ ನೇತೃತ್ವದ ಬಣ ಸಮಯ ಕೋರಿದರೆ, ಆ ಮನವಿಯನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.