‘ದೇಶದ ಅತ್ಯುನ್ನತ ನ್ಯಾಯಾಲಯದ ವಿರುದ್ಧ ಸುಳ್ಳು, ರಾಜಕೀಯ ಉದ್ದೇಶದ ಹೇಳಿಕೆಗಳನ್ನು ನೀಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ತಮ್ಮ ಸ್ಥಾನ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು’ ಎಂದು ಸುನಿಲ್ ಕುಮಾರ್ ಸಿಂಗ್, ಜಿ.ಎಸ್.ಮಣಿ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲುಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಅಸಮ್ಮತಿ ಸೂಚಿಸಿದ್ದರು.