<p><strong>ಮುಂಬೈ:</strong>ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಡೀಲರ್ ಒಬ್ಬನನ್ನುಮಾದಕವಸ್ತುಗಳ ನಿಯಂತ್ರಣ ಘಟಕ(ಎನ್ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಬಂಧಿತನನ್ನು ಜೈದ್ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ನಡೆಯುವ ಐಶಾರಾಮಿ ಪಾರ್ಟಿಗಳಿಗೆ ಗಾಂಜಾ ಸೇರಿದಂತೆ ಇತರ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಉತ್ತಮ ಗುಣಮಟ್ಟದ ಗಾಂಜಾವನ್ನು ಗ್ರಾಂಗೆ ₹5 ಸಾವಿರದಂತೆ ಮಾರುತ್ತಿದ್ದ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸುಶಾಂತ್ಸಿಂಗ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ ಮಾದಕವಸ್ತು ಪ್ರಕರಣದ ವಿಚಾರಣೆ ವೇಳೆ ದೊರೆತಪ್ರಮುಖ ಮಾಹಿತಿಗಳನ್ನು ಆಧರಿಸಿ ಈತನನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಮುಂಬೈ ಮಹಾನಗರದ ಪಶ್ಚಿಮ ಭಾಗದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಳೆದವಾರ ಎನ್ಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಮಹಾರಾಷ್ಟ್ರ, ದೆಹಲಿ ಮತ್ತು ಗೋವಾದಲ್ಲಿರುವ ಇಂಥ ಮಾದಕವಸ್ತುಗಳ ಕಳ್ಳ ಸಾಗಣೆದಾರರ ಮೇಲೆ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಡೀಲರ್ ಒಬ್ಬನನ್ನುಮಾದಕವಸ್ತುಗಳ ನಿಯಂತ್ರಣ ಘಟಕ(ಎನ್ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಬಂಧಿತನನ್ನು ಜೈದ್ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ನಡೆಯುವ ಐಶಾರಾಮಿ ಪಾರ್ಟಿಗಳಿಗೆ ಗಾಂಜಾ ಸೇರಿದಂತೆ ಇತರ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಉತ್ತಮ ಗುಣಮಟ್ಟದ ಗಾಂಜಾವನ್ನು ಗ್ರಾಂಗೆ ₹5 ಸಾವಿರದಂತೆ ಮಾರುತ್ತಿದ್ದ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸುಶಾಂತ್ಸಿಂಗ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ ಮಾದಕವಸ್ತು ಪ್ರಕರಣದ ವಿಚಾರಣೆ ವೇಳೆ ದೊರೆತಪ್ರಮುಖ ಮಾಹಿತಿಗಳನ್ನು ಆಧರಿಸಿ ಈತನನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಮುಂಬೈ ಮಹಾನಗರದ ಪಶ್ಚಿಮ ಭಾಗದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಳೆದವಾರ ಎನ್ಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಮಹಾರಾಷ್ಟ್ರ, ದೆಹಲಿ ಮತ್ತು ಗೋವಾದಲ್ಲಿರುವ ಇಂಥ ಮಾದಕವಸ್ತುಗಳ ಕಳ್ಳ ಸಾಗಣೆದಾರರ ಮೇಲೆ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>