‘ಈ ಸುಳ್ಳು ಆರೋಪವು ತೀವ್ರ ಮಾನಹಾನಿಕರವಾಗಿದೆ. ವಾಹಿನಿಗಳು ಇದೇರೀತಿ ಮುಂದುವರಿದರೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರನ್ನು ಒತ್ತಾಯಿಸಲಾಗುವುದು’ ಎಂದೂ ಹೇಳಿದ್ದಾರೆ.
ಜೊತೆಗೆ ಅನುಮತಿ ಪಡೆಯದೆ ನಟನಿಗೆ ಸಂಬಂಧಿಸಿದಂತೆ ಯಾವುದೇ ಪುಸ್ತಕ, ಸಿನಿಮಾ ಅಥವಾಧಾರಾವಾಹಿ ನಿರ್ಮಿಸುವಂತಿಲ್ಲ ಎಂಬ ನಿರ್ಧಾರವನ್ನುಸುಶಾಂತ್ ತಂದೆ ತೆಗೆದುಕೊಂಡಿದ್ದಾರೆ. ಇದನ್ನು ಮೀರಿ ಯಾರಾದರೂ ಮುಂದುವರಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
‘ರಿಯಾ ಚಕ್ರವರ್ತಿಯವರು ತಮ್ಮ ಜೀವನದಲ್ಲಿ ಬಂದ ಬಳಿಕ, ಸುಶಾಂತ್ ಅವರಲ್ಲಿ ಮಾನಸಿಕ ಸಮಸ್ಯೆಗಳು ಕಾಣಿಸಿಕೊಂಡಿದ್ದವು ಹಾಗೂ ಆತಂಕದ ಭಾವ ಆವರಿಸಿತ್ತು. ಹಾಗಾಗಿ ರಿಯಾ ಅವರು ಸುಶಾಂತ್ರ ಸಂಪೂರ್ಣ ಸಮಸ್ಯೆಗಳಿಗೆ ಕಾರಣರಾಗಿದ್ದಾರೆ ಎಂದು ಸದ್ಯ ದಾಖಲಾಗಿರುವ ಎಫ್ಐಆರ್ ಸ್ಪಷ್ಟವಾಗಿ ಹೇಳುತ್ತದೆ’ ಎಂದು ತಿಳಿಸಿದ್ದಾರೆ.
ಒಂದು ವರ್ಷದಿಂದ ಡೇಟಿಂಗ್ ನಡೆಸುತ್ತಿದ್ದ ರಿಯಾ ಅವರು ಜೂನ್ 8ರಂದು ಸುಶಾಂತ್ ಮನೆಯಿಂದ ಹೊರನಡೆದಿದ್ದರು. ಅದಾದ ಎಂಟು ದಿನಗಳ ನಂತರ ಸುಶಾಂತ್ (ಜುಲೈ 14) ಮೃತಪಟ್ಟಿದ್ದರು. ಹಾಗಾಗಿ, ಕೆಕೆ ಸಿಂಗ್ ಅವರು, ರಿಯಾ ಹಾಗೂ ಆಕೆಯ ಕುಟುಂಬದವರು ತಮ್ಮ ಮಗನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.
ಸದ್ಯ ಸುಪ್ರೀಂ ಕೋರ್ಟ್ ಆದೇಶದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ರಿಯಾ ಹಾಗೂ ಸುಶಾಂತ್ ಜೊತೆ ವಾಸವಿದ್ದ ಸ್ನೇಹಿತ, ಮನೆಗೆಲಸದವರನ್ನು ವಿಚಾರಣೆಗೆ ಒಪಡಿಸಿದೆ. ಮಾದಕವಸ್ತು ನಿಯಂತ್ರಣ ದಳ ಮತ್ತು ಜಾರಿ ನಿರ್ದೇಶನಾಲಯವೂ ಪ್ರಕರಣದ ತನಿಖೆ ಕೈಗೆತ್ತಿಕೊಂಡಿವೆ.