ಈ ವರ್ಷ ಮಾರ್ಚ್–ಏಪ್ರಿಲ್ನಲ್ಲಿ ನಡೆದ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಜಯಗಳಿಸಿ, ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಸುವೇಂದು ಅಧಿಕಾರಿ ಮೊದಲ ಬಾರಿಗೆ ಗೃಹ ಸಚಿವರು ಹಾಗೂ ಮತ್ತೊಬ್ಬ ಕೇಂದ್ರ ಸಚಿವ ಮನ್ಸುಖ್ ಮಾಂಡಿವಿಯಾ ಅವರನ್ನು ಭೇಟಿಯಾಗಿದ್ದಾರೆ. ನಂತರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.