ಕೋಲ್ಕತ್ತ: ಶಾಸಕ ಸ್ಥಾನಕ್ಕೆ ಬುಧವಾರವಷ್ಟೇ ರಾಜೀನಾಮೆ ನೀಡಿದ್ದ ಪಶ್ಚಿಮ ಬಂಗಾಳದ ಪ್ರಮುಖ ನಾಯಕ ಸುವೇಂದು ಅಧಿಕಾರಿ ಗುರುವಾರ ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದರು.
ಮೂಲಗಳ ಪ್ರಕಾರ, ಅವರು ಟಿಎಂಸಿ ನಾಯಕಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ಅಧಿಕಾರಿ ಕಳೆದ ತಿಂಗಳಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.