<p><strong>ಕೋಲ್ಕತ್ತ:</strong> ‘ಟಿಎಂಸಿಯ ಶಾಸಕ ಸುವೇಂದು ಅಧಿಕಾರಿ ಅವರ ರಾಜೀನಾಮೆಯು ಅಂಗೀಕಾರವಾಗಿಲ್ಲ’ ಎಂದು ಪಶ್ಚಿಮ ಬಂಗಾಳದ ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.</p>.<p>‘ಸಂವಿಧಾನದ ನಿಬಂಧನೆಗಳು ಮತ್ತು ಸದನದ ನಿಯಮಗಳಿಗೆ ಅನುಗುಣವಾಗಿ ಸುವೇಂದು ರಾಜೀನಾಮೆ ಸಲ್ಲಿಸಿಲ್ಲ. ಹಾಗಾಗಿ, ಅವರ ರಾಜೀನಾಮೆ ಅಂಗೀಕಾರವಾಗಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಈ ವಿಷಯಕ್ಕೆ ಸಂಬಂಧಪಟ್ಟಂತೆ ಡಿ. 21ರಂದು ತಮ್ಮ ಕೊಠಡಿಗೆ ಖುದ್ದು ಹಾಜರಾಗುವಂತೆಯೂ ಸುವೇಂದು ಅವರಿಗೆ ಬ್ಯಾನರ್ಜಿ ಸೂಚಿಸಿದ್ದಾರೆ.</p>.<p>‘ಸುವೇಂದು ಅವರು ವೈಯಕ್ತಿಕವಾಗಿ ನನ್ನನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿಲ್ಲ. ಅಷ್ಟೇ ಅಲ್ಲ, ರಾಜೀನಾಮೆಯು ಸ್ವಯಂಪ್ರೇರಿತವಾದದ್ದೇ ಅಥವಾ ಸಕಾರಣಕ್ಕಾಗಿ ನೀಡಲಾಗಿದೆಯೇ ಎಂಬ ಬಗ್ಗೆ ಯಾವುದೇ ಸುಳಿವೂ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ರಾಜೀನಾಮೆಯು ಸ್ವಯಂಪ್ರೇರಿತ ವಾದದ್ದು ಮತ್ತು ಸಕಾರಣವಾದದ್ದು ಎನ್ನುವ ಬಗ್ಗೆ ನನಗೆ ಮನವರಿಕೆಯಾಗದ ಹೊರತು ಸಂವಿಧಾನದ ನಿಬಂಧನೆಗಳು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳಡಿ ನಾನು ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಬಿಮನ್ ಬ್ಯಾನರ್ಜಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಚಿವ ಸಂಪುಟದಲ್ಲಿದ್ದ ಸುವೇಂದು ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ.16ರಂದು ವಿಧಾಸನಭಾ ಕಾರ್ಯದರ್ಶಿ ಅವರಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆ ಸಮಯದಲ್ಲಿ ವಿಧಾನಸಭೆಯ ಸ್ಪೀಕರ್ ಅವರು ಸದನದಲ್ಲಿ ಹಾಜರಿರಲಿಲ್ಲ.</p>.<p><strong>ಪಕ್ಷಕ್ಕೆ ರಾಜೀನಾಮೆ:</strong> ಬ್ಯಾರಕ್ಪುರ ಶಾಸಕ ಶೀಲಭದ್ರ ದತ್ತಾ ಅವರು ಟಿಎಂಸಿ ಪಕ್ಷಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ 24 ಗಂಟೆಗಳಲ್ಲಿ ಮೂವರು ಪ್ರಮುಖ ನಾಯಕರು ಪಕ್ಷ ತ್ಯಜಿಸಿದಂತಾಗಿದೆ.</p>.<p>ಶೀಲಭದ್ರ ದತ್ತಾ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರವನ್ನು ಇ–ಮೇಲ್ ಮೂಲಕ ಕಳುಹಿಸಿದ್ದಾರೆ. ಇತರ ನಾಯಕರಂತೆ ಅವರು ಕೂಡ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.</p>.<p>‘ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಶಾಸಕ ಸ್ಥಾನಕ್ಕಲ್ಲ’ ಎಂದು ಅವರು ವರದಿಗಾರರಿಗೆ ತಿಳಿಸಿದರು.</p>.<p><strong>ಬಿಜೆಪಿ ಮುಖಂಡರಿಗೆ ಕೋರ್ಟ್ನಿಂದ ಮಧ್ಯಂತರ ರಕ್ಷಣೆ</strong><br />ಕ್ರಿಮಿನಲ್ ಪ್ರಕರಣವೊಂದರಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಐವರು ಬಿಜೆಪಿ ಮುಖಂಡರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ರಕ್ಷಣೆ ಮಂಜೂರು ಮಾಡಿ, ಅವರ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.</p>.<p>ಈ ಪ್ರಕರಣದ ಮುಂದಿನ ವಿಚಾರಣೆ ನಡೆಯುವವರೆಗೆ ಈ ಐವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ, ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಟಿಎಂಸಿಯ ಶಾಸಕ ಸುವೇಂದು ಅಧಿಕಾರಿ ಅವರ ರಾಜೀನಾಮೆಯು ಅಂಗೀಕಾರವಾಗಿಲ್ಲ’ ಎಂದು ಪಶ್ಚಿಮ ಬಂಗಾಳದ ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.</p>.<p>‘ಸಂವಿಧಾನದ ನಿಬಂಧನೆಗಳು ಮತ್ತು ಸದನದ ನಿಯಮಗಳಿಗೆ ಅನುಗುಣವಾಗಿ ಸುವೇಂದು ರಾಜೀನಾಮೆ ಸಲ್ಲಿಸಿಲ್ಲ. ಹಾಗಾಗಿ, ಅವರ ರಾಜೀನಾಮೆ ಅಂಗೀಕಾರವಾಗಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಈ ವಿಷಯಕ್ಕೆ ಸಂಬಂಧಪಟ್ಟಂತೆ ಡಿ. 21ರಂದು ತಮ್ಮ ಕೊಠಡಿಗೆ ಖುದ್ದು ಹಾಜರಾಗುವಂತೆಯೂ ಸುವೇಂದು ಅವರಿಗೆ ಬ್ಯಾನರ್ಜಿ ಸೂಚಿಸಿದ್ದಾರೆ.</p>.<p>‘ಸುವೇಂದು ಅವರು ವೈಯಕ್ತಿಕವಾಗಿ ನನ್ನನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿಲ್ಲ. ಅಷ್ಟೇ ಅಲ್ಲ, ರಾಜೀನಾಮೆಯು ಸ್ವಯಂಪ್ರೇರಿತವಾದದ್ದೇ ಅಥವಾ ಸಕಾರಣಕ್ಕಾಗಿ ನೀಡಲಾಗಿದೆಯೇ ಎಂಬ ಬಗ್ಗೆ ಯಾವುದೇ ಸುಳಿವೂ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ರಾಜೀನಾಮೆಯು ಸ್ವಯಂಪ್ರೇರಿತ ವಾದದ್ದು ಮತ್ತು ಸಕಾರಣವಾದದ್ದು ಎನ್ನುವ ಬಗ್ಗೆ ನನಗೆ ಮನವರಿಕೆಯಾಗದ ಹೊರತು ಸಂವಿಧಾನದ ನಿಬಂಧನೆಗಳು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳಡಿ ನಾನು ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಬಿಮನ್ ಬ್ಯಾನರ್ಜಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಚಿವ ಸಂಪುಟದಲ್ಲಿದ್ದ ಸುವೇಂದು ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ.16ರಂದು ವಿಧಾಸನಭಾ ಕಾರ್ಯದರ್ಶಿ ಅವರಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆ ಸಮಯದಲ್ಲಿ ವಿಧಾನಸಭೆಯ ಸ್ಪೀಕರ್ ಅವರು ಸದನದಲ್ಲಿ ಹಾಜರಿರಲಿಲ್ಲ.</p>.<p><strong>ಪಕ್ಷಕ್ಕೆ ರಾಜೀನಾಮೆ:</strong> ಬ್ಯಾರಕ್ಪುರ ಶಾಸಕ ಶೀಲಭದ್ರ ದತ್ತಾ ಅವರು ಟಿಎಂಸಿ ಪಕ್ಷಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ 24 ಗಂಟೆಗಳಲ್ಲಿ ಮೂವರು ಪ್ರಮುಖ ನಾಯಕರು ಪಕ್ಷ ತ್ಯಜಿಸಿದಂತಾಗಿದೆ.</p>.<p>ಶೀಲಭದ್ರ ದತ್ತಾ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರವನ್ನು ಇ–ಮೇಲ್ ಮೂಲಕ ಕಳುಹಿಸಿದ್ದಾರೆ. ಇತರ ನಾಯಕರಂತೆ ಅವರು ಕೂಡ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.</p>.<p>‘ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಶಾಸಕ ಸ್ಥಾನಕ್ಕಲ್ಲ’ ಎಂದು ಅವರು ವರದಿಗಾರರಿಗೆ ತಿಳಿಸಿದರು.</p>.<p><strong>ಬಿಜೆಪಿ ಮುಖಂಡರಿಗೆ ಕೋರ್ಟ್ನಿಂದ ಮಧ್ಯಂತರ ರಕ್ಷಣೆ</strong><br />ಕ್ರಿಮಿನಲ್ ಪ್ರಕರಣವೊಂದರಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಐವರು ಬಿಜೆಪಿ ಮುಖಂಡರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ರಕ್ಷಣೆ ಮಂಜೂರು ಮಾಡಿ, ಅವರ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.</p>.<p>ಈ ಪ್ರಕರಣದ ಮುಂದಿನ ವಿಚಾರಣೆ ನಡೆಯುವವರೆಗೆ ಈ ಐವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ, ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>