<p><strong>ಕೋಲ್ಕತ್ತ:</strong> ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದುಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p>.<p>ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆಗುರುವಾರ (ಸೆ.29)ಪತ್ರ ಬರೆದಿದ್ದಾರೆ.</p>.<p>ಸಾರ್ವಜನಿಕ ಹಣಕಾಸು ನಿರ್ವಹಣಾ ಇಲಾಖೆಗೆ ಅನುದಾನದ ವಿವರ ನೀಡುವ ಮುನ್ನ, ರಾಜ್ಯ ಸರ್ಕಾರವು ಎಲ್ಲಾ ಕೇಂದ್ರದ ಹಣವನ್ನು ವೇತನ ಮತ್ತು ಸಂಚಿತ ನಿಧಿ ಮುಖ್ಯಸ್ಥರಿಗೆ ರವಾನಿಸಿದೆ ಎಂದುಪತ್ರದಲ್ಲಿ ಆರೋಪಿಸಿದ್ದಾರೆ.</p>.<p>'ನಿರ್ಧಿಷ್ಟ ವಿಭಾಗಗಳ ಮುಖ್ಯಸ್ಥರ ವಹಿವಾಟಿನ ಬಗ್ಗೆಕೂಲಂಕಷವಾಗಿ ನಡೆಸಬೇಕು. ರಾಜ್ಯ ಸರ್ಕಾರದ ಅಧಿಕಾರಿಗಳ ಪ್ರಭಾವಕ್ಕೆ ಒಳಗಾಗದವರಿಂದ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>ಸಾರ್ವಜನಿಕ ವಲಯದ ಬ್ಯಾಂಕ್ನಲ್ಲಿ ಖಾತೆ ತೆರೆಯಬೇಕು ಎಂಬ ರಾಜ್ಯ ಹಣಕಾಸು ಕಾರ್ಯದರ್ಶಿ ಮನೋಜ್ ಪಂತ್ ಅವರ ಆದ್ಯತೆಯನ್ನುಸರ್ಕಾರವು ಕಡೆಗಣಿಸಿದೆ.ಸಾರ್ವಜನಿಕ ಹಣಕಾಸು ನಿರ್ವಹಣೆಯ ರಾಜ್ಯ ನೋಡಲ್ ಖಾತೆಯನ್ನು ಐಸಿಐಸಿಐ ಬ್ಯಾಂಕ್ನಲ್ಲಿ ತೆರೆದಿದೆ ಎಂದೂ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದುಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p>.<p>ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆಗುರುವಾರ (ಸೆ.29)ಪತ್ರ ಬರೆದಿದ್ದಾರೆ.</p>.<p>ಸಾರ್ವಜನಿಕ ಹಣಕಾಸು ನಿರ್ವಹಣಾ ಇಲಾಖೆಗೆ ಅನುದಾನದ ವಿವರ ನೀಡುವ ಮುನ್ನ, ರಾಜ್ಯ ಸರ್ಕಾರವು ಎಲ್ಲಾ ಕೇಂದ್ರದ ಹಣವನ್ನು ವೇತನ ಮತ್ತು ಸಂಚಿತ ನಿಧಿ ಮುಖ್ಯಸ್ಥರಿಗೆ ರವಾನಿಸಿದೆ ಎಂದುಪತ್ರದಲ್ಲಿ ಆರೋಪಿಸಿದ್ದಾರೆ.</p>.<p>'ನಿರ್ಧಿಷ್ಟ ವಿಭಾಗಗಳ ಮುಖ್ಯಸ್ಥರ ವಹಿವಾಟಿನ ಬಗ್ಗೆಕೂಲಂಕಷವಾಗಿ ನಡೆಸಬೇಕು. ರಾಜ್ಯ ಸರ್ಕಾರದ ಅಧಿಕಾರಿಗಳ ಪ್ರಭಾವಕ್ಕೆ ಒಳಗಾಗದವರಿಂದ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>ಸಾರ್ವಜನಿಕ ವಲಯದ ಬ್ಯಾಂಕ್ನಲ್ಲಿ ಖಾತೆ ತೆರೆಯಬೇಕು ಎಂಬ ರಾಜ್ಯ ಹಣಕಾಸು ಕಾರ್ಯದರ್ಶಿ ಮನೋಜ್ ಪಂತ್ ಅವರ ಆದ್ಯತೆಯನ್ನುಸರ್ಕಾರವು ಕಡೆಗಣಿಸಿದೆ.ಸಾರ್ವಜನಿಕ ಹಣಕಾಸು ನಿರ್ವಹಣೆಯ ರಾಜ್ಯ ನೋಡಲ್ ಖಾತೆಯನ್ನು ಐಸಿಐಸಿಐ ಬ್ಯಾಂಕ್ನಲ್ಲಿ ತೆರೆದಿದೆ ಎಂದೂ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>