ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಹಣವನ್ನು ಬೇರೆಡೆ ವಿನಿಯೋಗಿಸುತ್ತಿರುವ ಮಮತಾ ಸರ್ಕಾರ: ಸುವೇಂದು ಅಧಿಕಾರಿ

Last Updated 30 ಸೆಪ್ಟೆಂಬರ್ 2022, 10:46 IST
ಅಕ್ಷರ ಗಾತ್ರ

ಕೋಲ್ಕತ್ತ: ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದುಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆಗುರುವಾರ (ಸೆ.29)ಪತ್ರ ಬರೆದಿದ್ದಾರೆ.

ಸಾರ್ವಜನಿಕ ಹಣಕಾಸು ನಿರ್ವಹಣಾ ಇಲಾಖೆಗೆ ಅನುದಾನದ ವಿವರ ನೀಡುವ ಮುನ್ನ, ರಾಜ್ಯ ಸರ್ಕಾರವು ಎಲ್ಲಾ ಕೇಂದ್ರದ ಹಣವನ್ನು ವೇತನ ಮತ್ತು ಸಂಚಿತ ನಿಧಿ ಮುಖ್ಯಸ್ಥರಿಗೆ ರವಾನಿಸಿದೆ ಎಂದುಪತ್ರದಲ್ಲಿ ಆರೋಪಿಸಿದ್ದಾರೆ.

'ನಿರ್ಧಿಷ್ಟ ವಿಭಾಗಗಳ ಮುಖ್ಯಸ್ಥರ ವಹಿವಾಟಿನ ಬಗ್ಗೆಕೂಲಂಕಷವಾಗಿ ನಡೆಸಬೇಕು. ರಾಜ್ಯ ಸರ್ಕಾರದ ಅಧಿಕಾರಿಗಳ ಪ್ರಭಾವಕ್ಕೆ ಒಳಗಾಗದವರಿಂದ ತನಿಖೆ ನಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು ಎಂಬ ರಾಜ್ಯ ಹಣಕಾಸು ಕಾರ್ಯದರ್ಶಿ ಮನೋಜ್‌ ಪಂತ್‌ ಅವರ ಆದ್ಯತೆಯನ್ನುಸರ್ಕಾರವು ಕಡೆಗಣಿಸಿದೆ.ಸಾರ್ವಜನಿಕ ಹಣಕಾಸು ನಿರ್ವಹಣೆಯ ರಾಜ್ಯ ನೋಡಲ್ ಖಾತೆಯನ್ನು ಐಸಿಐಸಿಐ ಬ್ಯಾಂಕ್‌ನಲ್ಲಿ ತೆರೆದಿದೆ ಎಂದೂ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT