<p><strong>ನವದೆಹಲಿ:</strong> ಆಸ್ತಿ ಮಾರಾಟ ಹಾಗೂ ಖರೀದಿ ಸರಳಗೊಳಿಸುವ ‘ಸ್ವಾಮಿತ್ವ’ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. ‘ಆಸ್ತಿಯ ಮಾಲೀಕತ್ವವನ್ನು ಖಚಿತಪಡಿಸುವ ಈ ಯೋಜನೆಯು ಗ್ರಾಮೀಣ ಭಾರತದಲ್ಲಿ ಮಹತ್ವದ ಬದಲಾವಣೆ ತರಬಲ್ಲ ಐತಿಹಾಸಿಕ ನಡೆ’ ಎಂದು ಪ್ರಧಾನಿ ಬಣ್ಣಿಸಿದ್ದಾರೆ.</p>.<p>‘ಗ್ರಾಮೀಣ ಭಾಗದ ಜನರು ಬ್ಯಾಂಕ್ನಲ್ಲಿ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಪಡೆಯುವುದನ್ನು ಈ ಯೋಜನೆಯು ಸುಲಭವಾಗಿಸಲಿದೆ. ಮೇಲಾಗಿ, ಭೂಮಾಲೀಕತ್ವ ವ್ಯಾಜ್ಯಗಳಿಂದ ಮುಕ್ತಿ ಕೊಡುತ್ತದೆ. ಆತ್ಮನಿರ್ಭರ ಯೋಜನೆ ಸಾಕಾರದಲ್ಲಿ ಇದೊಂದು ಮಹತ್ವದ ಹೆಜ್ಜೆ’ ಎಂದು ಅವರು ವಿವರಿಸಿದ್ದಾರೆ.</p>.<p>‘ಸರ್ವೇ ಆಫ್ ವಿಲೇಜಸ್ ಅಂಡ್ ಮ್ಯಾಪಿಂಗ್ ವಿತ್ ಇಂಪ್ರೊವೈಸ್ಡ್ ಟೆಕ್ನಾಲಜಿ ಇನ್ ವಿಲೇಜ್ ಏರಿಯಾ (ಎಸ್ವಿಎಎಂಐಟಿವಿಎ)’ ಯೋಜನೆಯ ಫಲಾನುಭವಿಗಳ ಜತೆ ಪ್ರಧಾನಿ ಸಂವಾದ ನಡೆಸಿದರು.</p>.<p>‘ಭಾರತದಂತಹ ಮುಂದುವರಿಯುತ್ತಿರುವ ದೇಶಕ್ಕೆ ವ್ಯಾಜ್ಯಮುಕ್ತ ಭೂಮಾಲೀಕತ್ವ ದಾಖಲೆಗಳು ಅತಿಮುಖ್ಯ. ಆಸ್ತಿ ಹಕ್ಕು ಯುವಜನತೆಯಲ್ಲಿ ಆತ್ಮವಿಶ್ವಾಸ ತುಂಬಲಿದ್ದು, ಸ್ವಾವಲಂಬನೆಗೆ ದಾರಿ ಮಾಡಿಕೊಡುತ್ತದೆ’ಎಂದರು.</p>.<p>‘ಮೂರ್ನಾಲ್ಕು ವರ್ಷಗಳಲ್ಲಿ ಪ್ರತೀ ಕುಟುಂಬಗಳಿಗೂ ಸೊತ್ತಿನ ಕಾರ್ಡ್ ವಿತರಿಸುವ ಗುರಿ ಇದೆ. ಪುರಸಭೆ, ನಗರ ಸಭೆಗಳ ರೀತಿಯಲ್ಲಿ ಈ ಯೋಜನೆಯಿಂದ ಪಂಚಾಯಿತಿಗಳಿಗೆ ಗ್ರಾಮಗಳ ನಿರ್ವಹಣೆ ಸುಲಭವಾಗಲಿದೆ’ ಎಂದರು.</p>.<p class="Briefhead"><strong>‘ಮಸೂದೆ ವಿರೋಧಿಗಳು ದಲ್ಲಾಳಿಗಳು’</strong></p>.<p>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವವರು ದಲ್ಲಾಳಿಗಳು ಎಂದು ಪ್ರಧಾನಿ ಟೀಕಿಸಿದ್ದಾರೆ. ‘ದಲ್ಲಾಳಿಗಳು ಮತ್ತು ಮಧ್ಯವರ್ತಿಗಳ ಬೆಂಬಲದಿಂದ ರಾಜಕಾರಣ ಮಾಡುತ್ತಿರುವವರು ಮಾತ್ರವೇ ಕೃಷಿ ಮಸೂದೆಗಳ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>ಕಳೆದ ಆರು ವರ್ಷಗಳಲ್ಲಿ ತಮ್ಮ ಸರ್ಕಾರ ಗ್ರಾಮಗಳು ಮತ್ತು ಗ್ರಾಮೀಣ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಹಿಂದಿನ ಆರು ದಶಕಗಳಲ್ಲಿ ಇಷ್ಟು ಕೆಲಸ ಆಗಿರಲಿಲ್ಲ ಎಂದರು.ಈ ಮೊದಲು ದೇಶದಲ್ಲಿ ಆಡಳಿತ ನಡೆಸಿದವರು ಗ್ರಾಮೀಣ ಭಾರತವನ್ನು ಮರೆತಿದ್ದರು ಎಂದು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.</p>.<p class="Briefhead"><strong>ಯೋಜನೆಯ ಸುತ್ತ</strong></p>.<p>*ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯವು ಏಪ್ರಿಲ್ 14ರ ‘ಪಂಚಾಯತ್ ರಾಜ್ ದಿನ’ದಂದು ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿತ್ತು</p>.<p>*ಭೂ ದಾಖಲೆಗಳನ್ನು ರಚಿಸಲು ಡ್ರೋನ್ಗಳನ್ನು ಬಳಸಿಕೊಂಡು ಗ್ರಾಮೀಣ ಜನವಸತಿ ಭೂಮಿಯನ್ನು ಮ್ಯಾಪಿಂಗ್ ಮಾಡಲಾಗುತ್ತದೆ</p>.<p>*ನಾಲ್ಕು ವರ್ಷಗಳ (2020–2024) ಅವಧಿಯಲ್ಲಿ ಹಂತ ಹಂತವಾಗಿ 6.62 ಲಕ್ಷ ಗ್ರಾಮಗಳಲ್ಲಿ ಯೋಜನೆ ಅನುಷ್ಠಾನವಾಗಲಿದೆ</p>.<p>*ಪ್ರಾಥಮಿಕ ಹಂತದಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 1 ಲಕ್ಷ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ</p>.<p class="Briefhead"><strong>ರಾಮನಗರದ ನಾಲ್ಕು ಗ್ರಾಮ</strong></p>.<p>ಕರ್ನಾಟಕದ ನಾಲ್ಕು ಗ್ರಾಮಗಳು ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳ ಫಲಾನುಭವಿಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ರಾಮನಗರ ತಾಲ್ಲೂಕಿನ ಎಂ.ಜಿ. ಪಾಳ್ಯ, ಮಜರೆ ಸೀಬಕಟ್ಟೆ, ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿವೆ.ಉತ್ತರ ಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44 ಹಾಗೂ ಉತ್ತರಾಖಂಡ್ನ 50 ಗ್ರಾಮಗಳು ಯೋಜನೆಗೆ ಒಳಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಸ್ತಿ ಮಾರಾಟ ಹಾಗೂ ಖರೀದಿ ಸರಳಗೊಳಿಸುವ ‘ಸ್ವಾಮಿತ್ವ’ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. ‘ಆಸ್ತಿಯ ಮಾಲೀಕತ್ವವನ್ನು ಖಚಿತಪಡಿಸುವ ಈ ಯೋಜನೆಯು ಗ್ರಾಮೀಣ ಭಾರತದಲ್ಲಿ ಮಹತ್ವದ ಬದಲಾವಣೆ ತರಬಲ್ಲ ಐತಿಹಾಸಿಕ ನಡೆ’ ಎಂದು ಪ್ರಧಾನಿ ಬಣ್ಣಿಸಿದ್ದಾರೆ.</p>.<p>‘ಗ್ರಾಮೀಣ ಭಾಗದ ಜನರು ಬ್ಯಾಂಕ್ನಲ್ಲಿ ಸಾಲ ಮತ್ತು ಇತರ ಹಣಕಾಸು ಸೌಲಭ್ಯಗಳನ್ನು ಪಡೆಯುವುದನ್ನು ಈ ಯೋಜನೆಯು ಸುಲಭವಾಗಿಸಲಿದೆ. ಮೇಲಾಗಿ, ಭೂಮಾಲೀಕತ್ವ ವ್ಯಾಜ್ಯಗಳಿಂದ ಮುಕ್ತಿ ಕೊಡುತ್ತದೆ. ಆತ್ಮನಿರ್ಭರ ಯೋಜನೆ ಸಾಕಾರದಲ್ಲಿ ಇದೊಂದು ಮಹತ್ವದ ಹೆಜ್ಜೆ’ ಎಂದು ಅವರು ವಿವರಿಸಿದ್ದಾರೆ.</p>.<p>‘ಸರ್ವೇ ಆಫ್ ವಿಲೇಜಸ್ ಅಂಡ್ ಮ್ಯಾಪಿಂಗ್ ವಿತ್ ಇಂಪ್ರೊವೈಸ್ಡ್ ಟೆಕ್ನಾಲಜಿ ಇನ್ ವಿಲೇಜ್ ಏರಿಯಾ (ಎಸ್ವಿಎಎಂಐಟಿವಿಎ)’ ಯೋಜನೆಯ ಫಲಾನುಭವಿಗಳ ಜತೆ ಪ್ರಧಾನಿ ಸಂವಾದ ನಡೆಸಿದರು.</p>.<p>‘ಭಾರತದಂತಹ ಮುಂದುವರಿಯುತ್ತಿರುವ ದೇಶಕ್ಕೆ ವ್ಯಾಜ್ಯಮುಕ್ತ ಭೂಮಾಲೀಕತ್ವ ದಾಖಲೆಗಳು ಅತಿಮುಖ್ಯ. ಆಸ್ತಿ ಹಕ್ಕು ಯುವಜನತೆಯಲ್ಲಿ ಆತ್ಮವಿಶ್ವಾಸ ತುಂಬಲಿದ್ದು, ಸ್ವಾವಲಂಬನೆಗೆ ದಾರಿ ಮಾಡಿಕೊಡುತ್ತದೆ’ಎಂದರು.</p>.<p>‘ಮೂರ್ನಾಲ್ಕು ವರ್ಷಗಳಲ್ಲಿ ಪ್ರತೀ ಕುಟುಂಬಗಳಿಗೂ ಸೊತ್ತಿನ ಕಾರ್ಡ್ ವಿತರಿಸುವ ಗುರಿ ಇದೆ. ಪುರಸಭೆ, ನಗರ ಸಭೆಗಳ ರೀತಿಯಲ್ಲಿ ಈ ಯೋಜನೆಯಿಂದ ಪಂಚಾಯಿತಿಗಳಿಗೆ ಗ್ರಾಮಗಳ ನಿರ್ವಹಣೆ ಸುಲಭವಾಗಲಿದೆ’ ಎಂದರು.</p>.<p class="Briefhead"><strong>‘ಮಸೂದೆ ವಿರೋಧಿಗಳು ದಲ್ಲಾಳಿಗಳು’</strong></p>.<p>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸುತ್ತಿರುವವರು ದಲ್ಲಾಳಿಗಳು ಎಂದು ಪ್ರಧಾನಿ ಟೀಕಿಸಿದ್ದಾರೆ. ‘ದಲ್ಲಾಳಿಗಳು ಮತ್ತು ಮಧ್ಯವರ್ತಿಗಳ ಬೆಂಬಲದಿಂದ ರಾಜಕಾರಣ ಮಾಡುತ್ತಿರುವವರು ಮಾತ್ರವೇ ಕೃಷಿ ಮಸೂದೆಗಳ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p>ಕಳೆದ ಆರು ವರ್ಷಗಳಲ್ಲಿ ತಮ್ಮ ಸರ್ಕಾರ ಗ್ರಾಮಗಳು ಮತ್ತು ಗ್ರಾಮೀಣ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಹಿಂದಿನ ಆರು ದಶಕಗಳಲ್ಲಿ ಇಷ್ಟು ಕೆಲಸ ಆಗಿರಲಿಲ್ಲ ಎಂದರು.ಈ ಮೊದಲು ದೇಶದಲ್ಲಿ ಆಡಳಿತ ನಡೆಸಿದವರು ಗ್ರಾಮೀಣ ಭಾರತವನ್ನು ಮರೆತಿದ್ದರು ಎಂದು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.</p>.<p class="Briefhead"><strong>ಯೋಜನೆಯ ಸುತ್ತ</strong></p>.<p>*ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯವು ಏಪ್ರಿಲ್ 14ರ ‘ಪಂಚಾಯತ್ ರಾಜ್ ದಿನ’ದಂದು ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿತ್ತು</p>.<p>*ಭೂ ದಾಖಲೆಗಳನ್ನು ರಚಿಸಲು ಡ್ರೋನ್ಗಳನ್ನು ಬಳಸಿಕೊಂಡು ಗ್ರಾಮೀಣ ಜನವಸತಿ ಭೂಮಿಯನ್ನು ಮ್ಯಾಪಿಂಗ್ ಮಾಡಲಾಗುತ್ತದೆ</p>.<p>*ನಾಲ್ಕು ವರ್ಷಗಳ (2020–2024) ಅವಧಿಯಲ್ಲಿ ಹಂತ ಹಂತವಾಗಿ 6.62 ಲಕ್ಷ ಗ್ರಾಮಗಳಲ್ಲಿ ಯೋಜನೆ ಅನುಷ್ಠಾನವಾಗಲಿದೆ</p>.<p>*ಪ್ರಾಥಮಿಕ ಹಂತದಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 1 ಲಕ್ಷ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ</p>.<p class="Briefhead"><strong>ರಾಮನಗರದ ನಾಲ್ಕು ಗ್ರಾಮ</strong></p>.<p>ಕರ್ನಾಟಕದ ನಾಲ್ಕು ಗ್ರಾಮಗಳು ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳ ಫಲಾನುಭವಿಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ರಾಮನಗರ ತಾಲ್ಲೂಕಿನ ಎಂ.ಜಿ. ಪಾಳ್ಯ, ಮಜರೆ ಸೀಬಕಟ್ಟೆ, ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿವೆ.ಉತ್ತರ ಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44 ಹಾಗೂ ಉತ್ತರಾಖಂಡ್ನ 50 ಗ್ರಾಮಗಳು ಯೋಜನೆಗೆ ಒಳಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>