ಶಿವಶಂಕರ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ಉಲ್ಲೇಖಿಸಿದ್ದು, ಅದರಲ್ಲಿ ಸ್ವಪ್ನಾ ಸುರೇಶ್ ಅವರ ಬಗ್ಗೆಯೂ ಬರೆದಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರ ಘೋಷಣೆಯಾದ ಬೆನ್ನಿಗೇ, ಸ್ವಪ್ನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಶಿವಶಂಕರ್ ನನ್ನನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಶೋಷಿಸಿದ್ದಾರೆ, ನನ್ನ ಜೀವನ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.