<p><strong>ಕೊಚ್ಚಿ:</strong> ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕೊಚ್ಚಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.</p>.<p>ಇಡೀ ದೇಶವೇ ತಿರುಗಿನೋಡುವಂತೆ ಮಾಡಿದ್ದ ಕೇರಳ ಚಿನ್ನ ಸಾಗಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.</p>.<p>ಅದರೆ, ಸ್ವಪ್ನಾ ಸುರೇಶ್ ಭಯೋತ್ಪಾದಕ ಸಂಪರ್ಕಗಳ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಜೈಲುವಾಸ ಮುಂದುವರಿದೆ.</p>.<p>ಕನಿಷ್ಟ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಈ ಅಪರಾಧ ಪ್ರಕರಣದಲ್ಲಿ ಅ.5ರ ವೇಳೆಗೆ ಸ್ವಪ್ನ ಸುರೇಶ್ರನ್ನು 60 ದಿನಗಳಿಗಿಂತಲೂ ಹೆಚ್ಚು ದಿನ ಕಸ್ಟಡಿಯಲ್ಲಿ ಇಡಲಾಗಿತ್ತು. 60 ದಿನಗಳ ಈ ಅವಧಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಆರ್ಪಿಸಿ ಸೆಕ್ಷನ್ 167 (2) ಅಡಿಯಲ್ಲಿ ಸ್ವಪ್ನಾ ಸುರೇಶ್ ಜಾಮೀನು ಪಡೆಯಲು ಅರ್ಹವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿತು.</p>.<p>ಜುಲೈ 5 ರಂದು ದುಬೈನಿಂದ ಬಂದಿದ್ದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಲ್ಲಿ 30 ಕೆಜಿ ಚಿನ್ನವನ್ನು ಗುಪ್ತವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕೊಚ್ಚಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.</p>.<p>ಇಡೀ ದೇಶವೇ ತಿರುಗಿನೋಡುವಂತೆ ಮಾಡಿದ್ದ ಕೇರಳ ಚಿನ್ನ ಸಾಗಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.</p>.<p>ಅದರೆ, ಸ್ವಪ್ನಾ ಸುರೇಶ್ ಭಯೋತ್ಪಾದಕ ಸಂಪರ್ಕಗಳ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಜೈಲುವಾಸ ಮುಂದುವರಿದೆ.</p>.<p>ಕನಿಷ್ಟ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಈ ಅಪರಾಧ ಪ್ರಕರಣದಲ್ಲಿ ಅ.5ರ ವೇಳೆಗೆ ಸ್ವಪ್ನ ಸುರೇಶ್ರನ್ನು 60 ದಿನಗಳಿಗಿಂತಲೂ ಹೆಚ್ಚು ದಿನ ಕಸ್ಟಡಿಯಲ್ಲಿ ಇಡಲಾಗಿತ್ತು. 60 ದಿನಗಳ ಈ ಅವಧಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಆರ್ಪಿಸಿ ಸೆಕ್ಷನ್ 167 (2) ಅಡಿಯಲ್ಲಿ ಸ್ವಪ್ನಾ ಸುರೇಶ್ ಜಾಮೀನು ಪಡೆಯಲು ಅರ್ಹವಾಗಿದ್ದಾರೆ ಎಂದು ನ್ಯಾಯಾಲಯ ಹೇಳಿತು.</p>.<p>ಜುಲೈ 5 ರಂದು ದುಬೈನಿಂದ ಬಂದಿದ್ದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಲ್ಲಿ 30 ಕೆಜಿ ಚಿನ್ನವನ್ನು ಗುಪ್ತವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>