ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಸಾಗಣೆ ಪ್ರಕರಣ: ಕೇರಳ ಸಿಎಂ ಮತ್ತು ಸ್ಪೀಕರ್ ವಿರುದ್ಧ ಸ್ವಪ್ನಾ ಆರೋಪ

Last Updated 5 ಮಾರ್ಚ್ 2021, 15:45 IST
ಅಕ್ಷರ ಗಾತ್ರ

ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಅವರು ತನಿಖೆಯ ವೇಳೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಮತ್ತು ಕೆಲ ಸಚಿವರ ಮೇಲೆ ಆರೋಪ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಕಸ್ಟಮ್ಸ್‌ ಇಲಾಖೆಯ ಅಧಿಕಾರಿಗಳು ಕೇರಳ ಹೈಕೋರ್ಟ್‌ಗೆ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹಗರಣದಲ್ಲಿ ಯುಇಎ ರಾಯಭಾರ ಕಚೇರಿ ಅಧಿಕಾರಿಗಳು ಭಾಗಿಯಾಗಿರುವ ಆರೋಪವಿದೆ.

ಸಿಆರ್‌ಪಿಸಿ ಸೆಕ್ಷನ್ 108, 164ರಡಿ ನೀಡಿದ ಹೇಳಿಕೆಯಲ್ಲಿ ‘ಆಘಾತಕಾರಿ’ ಮಾಹಿತಿ ನೀಡಿದ್ದಾರೆ ಎಂದು ಕಸ್ಟಮ್ಸ್ (ನಿಯಂತ್ರಣ) ಕಮಿಷನರ್ ಸುಮಿತ್ ಕುಮಾರ್ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಅವರಿಗೆ ಯುಎಇ ರಾಯಭಾರ ಕಚೇರಿಯ ಹಿಂದಿನ ರಾಯಭಾರಿ ಜೊತೆಗೆ ಒಡನಾಟ ಇತ್ತು. ನಿಯಮಬಾಹಿರವಾಗಿ ಹಣಕಾಸು ವಹಿವಾಟು ನಡೆಯುತ್ತಿತ್ತು. ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರ ಸೂಚನೆಯ ಮೇರೆಗೆ ವಿದೇಶಿ ಕರೆನ್ಸಿಯನ್ನು ಸಾಗಿಸುತ್ತಿದ್ದೆ ಎಂದು ಸ್ವಪ್ನಾ ಸುರೇಶ್ ಸ್ಪಷ್ಟವಾಗಿ ಹೇಳಿದ್ದಾರೆ’ ಎಂದು ತಿಳಿಸಿದ್ದಾರೆ.

ಯುಎಇ ಕಾನ್ಸುಲೇಟ್‌ನ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥೆಯು ತಿರುವನಂತಪುರಂನಿಂದ ಮಸ್ಕಟ್‌ಗೆ ಸುಮಾರು ₹1.30 ಕೋಟಿಗೆ ಸಮನಾದ ಡಾಲರ್ ಸಾಗಣೆ ಕುರಿತ ಪ್ರಕರಣಕ್ಕೆ ಸಂಬಂಧಿಸಿ ಈ ಹೇಳಿಕೆ ನೀಡಿದ್ದಾರೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT