<p><strong>ನವದೆಹಲಿ: </strong>ನಾಲ್ವರು ರೈತರು ಸೇರಿ ಎಂಟು ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.</p>.<p>‘ರೈತರನ್ನು ಜೀಪ್ ಮೂಲಕ ಕೆಳಗೆ ತಳ್ಳಿ ಕಾರು ಹತ್ತಿಸಿ ಹತ್ಯೆ ಮಾಡಲಾಗಿದೆ. ನಿನ್ನೆ ಪ್ರಧಾನಿ ಮೋದಿ ಲಖನೌಗೆ ಭೇಟಿ ನೀಡಿದ್ದರು. ಆದರೆ, ಅವರು ಲಖಿಂಪುರ್ ಖೇರಿಗೆ ಭೇಟಿ ನೀಡಲಿಲ್ಲ. ಇದು ರೈತರ ಮೇಲೆ ನಡೆಸಿರುವ ‘ವ್ಯವಸ್ಥಿತ ದಾಳಿ’ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ಸರ್ಕಾರವು ರೈತರನ್ನು ಅವಮಾನಿಸುತ್ತಿದೆ. ಇದು ಅವರ ಕೆಟ್ಟ ಆಲೋಚನೆಯಾಗಿದೆ. ಕೆಲ ಸಮಯದಿಂದ ಸರ್ಕಾರವು ರೈತರ ಮೇಲೆ 'ದಾಳಿ' ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.</p>.<p>ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವುದು ಪ್ರತಿಪಕ್ಷಗಳ ಕೆಲಸ ಎಂದ ರಾಹುಲ್ ಗಾಂಧಿ, ‘ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಅದು ಕೆಲಸ ಮಾಡಿದೆ. ನಾವು ಕೃಷಿ ಕಾಯ್ದೆಯ ವಿಷಯದಲ್ಲಿಯೂ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದೇವೆ, ಆದರೆ ಸರ್ಕಾರವು ನಮಗೆ ಅವಕಾಶ ನೀಡುತ್ತಿಲ್ಲ. ಈ ವಿಷಯವನ್ನು ಪ್ರಸ್ತಾಪಿಸುವುದು ನಿಮ್ಮ (ಮಾಧ್ಯಮ) ಜವಾಬ್ದಾರಿ, ಆದರೆ, ನಾವು ಪ್ರಶ್ನೆಗಳನ್ನು ಕೇಳಿದಾಗ, ನೀವು (ಮಾಧ್ಯಮ) ರಾಜಕೀಯ ಮಾಡುತ್ತಿದ್ದೀರಿ ಎಂದು ನಮಗೆ ಹೇಳುತ್ತೀರಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನಾಲ್ವರು ರೈತರು ಸೇರಿ ಎಂಟು ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.</p>.<p>‘ರೈತರನ್ನು ಜೀಪ್ ಮೂಲಕ ಕೆಳಗೆ ತಳ್ಳಿ ಕಾರು ಹತ್ತಿಸಿ ಹತ್ಯೆ ಮಾಡಲಾಗಿದೆ. ನಿನ್ನೆ ಪ್ರಧಾನಿ ಮೋದಿ ಲಖನೌಗೆ ಭೇಟಿ ನೀಡಿದ್ದರು. ಆದರೆ, ಅವರು ಲಖಿಂಪುರ್ ಖೇರಿಗೆ ಭೇಟಿ ನೀಡಲಿಲ್ಲ. ಇದು ರೈತರ ಮೇಲೆ ನಡೆಸಿರುವ ‘ವ್ಯವಸ್ಥಿತ ದಾಳಿ’ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>‘ಸರ್ಕಾರವು ರೈತರನ್ನು ಅವಮಾನಿಸುತ್ತಿದೆ. ಇದು ಅವರ ಕೆಟ್ಟ ಆಲೋಚನೆಯಾಗಿದೆ. ಕೆಲ ಸಮಯದಿಂದ ಸರ್ಕಾರವು ರೈತರ ಮೇಲೆ 'ದಾಳಿ' ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.</p>.<p>ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವುದು ಪ್ರತಿಪಕ್ಷಗಳ ಕೆಲಸ ಎಂದ ರಾಹುಲ್ ಗಾಂಧಿ, ‘ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಅದು ಕೆಲಸ ಮಾಡಿದೆ. ನಾವು ಕೃಷಿ ಕಾಯ್ದೆಯ ವಿಷಯದಲ್ಲಿಯೂ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದೇವೆ, ಆದರೆ ಸರ್ಕಾರವು ನಮಗೆ ಅವಕಾಶ ನೀಡುತ್ತಿಲ್ಲ. ಈ ವಿಷಯವನ್ನು ಪ್ರಸ್ತಾಪಿಸುವುದು ನಿಮ್ಮ (ಮಾಧ್ಯಮ) ಜವಾಬ್ದಾರಿ, ಆದರೆ, ನಾವು ಪ್ರಶ್ನೆಗಳನ್ನು ಕೇಳಿದಾಗ, ನೀವು (ಮಾಧ್ಯಮ) ರಾಜಕೀಯ ಮಾಡುತ್ತಿದ್ದೀರಿ ಎಂದು ನಮಗೆ ಹೇಳುತ್ತೀರಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>