ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವುದು ಪ್ರತಿಪಕ್ಷಗಳ ಕೆಲಸ ಎಂದ ರಾಹುಲ್ ಗಾಂಧಿ, ‘ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಅದು ಕೆಲಸ ಮಾಡಿದೆ. ನಾವು ಕೃಷಿ ಕಾಯ್ದೆಯ ವಿಷಯದಲ್ಲಿಯೂ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದೇವೆ, ಆದರೆ ಸರ್ಕಾರವು ನಮಗೆ ಅವಕಾಶ ನೀಡುತ್ತಿಲ್ಲ. ಈ ವಿಷಯವನ್ನು ಪ್ರಸ್ತಾಪಿಸುವುದು ನಿಮ್ಮ (ಮಾಧ್ಯಮ) ಜವಾಬ್ದಾರಿ, ಆದರೆ, ನಾವು ಪ್ರಶ್ನೆಗಳನ್ನು ಕೇಳಿದಾಗ, ನೀವು (ಮಾಧ್ಯಮ) ರಾಜಕೀಯ ಮಾಡುತ್ತಿದ್ದೀರಿ ಎಂದು ನಮಗೆ ಹೇಳುತ್ತೀರಿ’ ಎಂದು ಹೇಳಿದರು.