ಚೆನ್ನೈ: ನವದೆಹಲಿಯ ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಪಟ್ಟಿಯಿಂದ ತಿರಸ್ಕೃತಗೊಂಡಿರುವ, ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಪರಿಚಯಿಸುವ ಸ್ತಬ್ಧಚಿತ್ರವೇ ಈ ಬಾರಿಯ ರಾಜ್ಯದ ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದ್ದು, ಈ ಮೂಲಕ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ತಿರುಗೇಟು ನೀಡಲು ಡಿಎಂಕೆ ಸರ್ಕಾರ ನಿರ್ಧರಿಸಿದೆ.