ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು, ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಹಾಗೂ ಇತರ ಎಂಟು ಮಂದಿ ಭವಿಷ್ಯದಲ್ಲಿ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ವೀಸಾಕ್ಕೆ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್ನ ಆದೇಶದ ಪ್ರಭಾವಕ್ಕೆ ಒಳಗಾಗದೆ ಅರ್ಹತೆಯ ಆಧಾರದಲ್ಲಿ ಅವರ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದೆ.