ಬೋಲ್ಪುರ (ಪಶ್ಚಿಮ ಬಂಗಾಳ): ‘ಬಿಜೆಪಿ ಹೊರಗಿನವರ ಪಕ್ಷ’ ಎಂಬ ಟೀಕೆಯನ್ನು ಪುನರುಚ್ಚರಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಠ್ಯಾಗೋರ್ ಅವರ ಈ ಭೂಮಿ ಎಂದಿಗೂ ಜಾತ್ಯತೀತತೆಯ ಮೇಲೆ ದ್ವೇಷದ ರಾಜಕಾರಣ ಸವಾರಿ ಮಾಡಲು ಬಿಡುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ.