ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಳವಳ ವ್ಯಕ್ತಪಡಿಸಿದ್ದು, ‘ನಿಮ್ಮ ಆರೋಗ್ಯದ ಬಗ್ಗೆ ನೀವೇ ಕಾಳಜಿ ವಹಿಸಬೇಕು. ಸರ್ಕಾರ ಮಾರಾಟದಲ್ಲಿ ನಿರತವಾಗಿದೆ’ ಎಂದು ಗುರುವಾರ ಟೀಕಿಸಿದ್ದಾರೆ.
ಇತ್ತೀಚಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ‘ಕಳೆದ 70 ವರ್ಷಗಳಲ್ಲಿ ಕಟ್ಟಲಾದ ದೇಶದ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ’ ಎಂದು ದೂರಿದ್ದಾರೆ.
‘ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯು ಆತಂಕ ಮೂಡಿಸಿದೆ. ಮುಂದಿನ ಅಲೆಯಿಂದ ಭೀಕರ ಪರಿಣಾಮಗಳು ಉಂಟಾಗಬಹುದು. ಅವುಗಳಿಂದ ದೂರವಿರಬೇಕಾದರೆ ಲಸಿಕೆ ಅಭಿಯಾನವನ್ನು ಇನ್ನಷ್ಟು ತ್ವರಿತಗಿಳಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
Rising #COVID numbers are worrying. Vaccination must pick up pace to avoid serious outcomes in the next wave.
Please take care of yourselves because GOI is busy with sales.