<p><strong>ನವದೆಹಲಿ</strong>: ಹಿಂದೂಗಳ ಸಂಖ್ಯೆ ಕಡಿಮೆ ಇರುವ ರಾಜ್ಯಗಳಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಘೋಷಿಸುವ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ ಕೇಂದ್ರ ಸರ್ಕಾರದ ನಡೆ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಹಿಂದೂಗಳು ಹಾಗೂ ಇತರೆ ಸಮುದಾಯದವರ ಸಂಖ್ಯೆ ಕಡಿಮೆ ಇದ್ದರೆ ಆ ರಾಜ್ಯದ ವ್ಯಾಪ್ತಿಯಲ್ಲಿ ಅವ<br />ರನ್ನು ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂದು ಮಾರ್ಚ್ 27ರಂದು ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಅಲ್ಪಸಂಖ್ಯಾತರು ಎಂದು ಘೋಷಿಸಿದರೆ ದೂರಗಾಮಿ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ, ವ್ಯಾಪಕ ಸಮಾಲೋಚನೆ ಅಗತ್ಯ ಎಂದು ಕೇಂದ್ರ ಸೋಮವಾರ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೇಳಿತ್ತು.</p>.<p>ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕೋರ್ಟ್, ಕೇಂದ್ರ ಸರ್ಕಾರವು ಈ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳದ ಕಾರಣ, ಅನಿಶ್ಚಿತತೆ ಉಳಿದುಕೊಂಡಿದೆ ಎಂದು ಹೇಳಿತು.</p>.<p>ಹಿಂದೂಗಳ ಜನಸಂಖ್ಯೆ ಕಡಿಮೆ ಇರುವ ಪ್ರದೇಶಗಳಲ್ಲಿ, ಸಮುದಾಯಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತಂತೆ ರಾಜ್ಯಗಳು ಹಾಗೂ ಸಂಬಂಧಪಟ್ಟವರ ಜೊತೆ ಸಮಾಲೋಚನೆ ನಡೆಸಲು ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳು ಕಾಲಾವಕಾಶ ನೀಡಲು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ಪೀಠ ನಿರ್ಧರಿಸಿತು.</p>.<p>ಕೇಂದ್ರ ಸರ್ಕಾರವು ಈ ಹಿಂದೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ತೆಗೆದುಕೊಂಡಿದ್ದ ನಿಲುವಿಗಿಂತ ಭಿನ್ನವಾದ ನಿಲುವು ಮತ್ತೊಂದು ಪ್ರಮಾಣಪತ್ರದಲ್ಲಿ ಇದೆ ಎಂಬ ವಿಚಾರವನ್ನು ಅರ್ಜಿದಾರರು ಗಮನಕ್ಕೆ ತಂದಿದ್ದಾರೆ ಎಂದು ಕೋರ್ಟ್ ಹೇಳಿತು. ಅಲ್ಪಸಂಖ್ಯಾತರು ಎಂದು ಘೋಷಿಸುವುದಕ್ಕೂ ಮುನ್ನ ಸಮಾಲೋಚನೆ ನಡೆಸಬೇಕಿದೆ ಎಂದು ಪ್ರಮಾಣಪತ್ರದಲ್ಲಿ ಕೇಂದ್ರ ಹೇಳಿದೆ. ಆದರೆ, ಈ ರೀತಿ ಭಿನ್ನ ನಿಲುವು ತೆಗೆದುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿರ್ಣಯ ತೆಗೆದುಕೊಳ್ಳುವುದು ಮುಖ್ಯ ಎಂದು ಪೀಠ ಹೇಳಿತು.</p>.<p>ಮುಂದಿನ ವಿಚಾರಣೆಯನ್ನು ಆಗಸ್ಟ್ 30ಕ್ಕೆ ನಿಗದಿಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಿಂದೂಗಳ ಸಂಖ್ಯೆ ಕಡಿಮೆ ಇರುವ ರಾಜ್ಯಗಳಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಘೋಷಿಸುವ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ ಕೇಂದ್ರ ಸರ್ಕಾರದ ನಡೆ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಹಿಂದೂಗಳು ಹಾಗೂ ಇತರೆ ಸಮುದಾಯದವರ ಸಂಖ್ಯೆ ಕಡಿಮೆ ಇದ್ದರೆ ಆ ರಾಜ್ಯದ ವ್ಯಾಪ್ತಿಯಲ್ಲಿ ಅವ<br />ರನ್ನು ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂದು ಮಾರ್ಚ್ 27ರಂದು ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಅಲ್ಪಸಂಖ್ಯಾತರು ಎಂದು ಘೋಷಿಸಿದರೆ ದೂರಗಾಮಿ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ, ವ್ಯಾಪಕ ಸಮಾಲೋಚನೆ ಅಗತ್ಯ ಎಂದು ಕೇಂದ್ರ ಸೋಮವಾರ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೇಳಿತ್ತು.</p>.<p>ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕೋರ್ಟ್, ಕೇಂದ್ರ ಸರ್ಕಾರವು ಈ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳದ ಕಾರಣ, ಅನಿಶ್ಚಿತತೆ ಉಳಿದುಕೊಂಡಿದೆ ಎಂದು ಹೇಳಿತು.</p>.<p>ಹಿಂದೂಗಳ ಜನಸಂಖ್ಯೆ ಕಡಿಮೆ ಇರುವ ಪ್ರದೇಶಗಳಲ್ಲಿ, ಸಮುದಾಯಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತಂತೆ ರಾಜ್ಯಗಳು ಹಾಗೂ ಸಂಬಂಧಪಟ್ಟವರ ಜೊತೆ ಸಮಾಲೋಚನೆ ನಡೆಸಲು ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳು ಕಾಲಾವಕಾಶ ನೀಡಲು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ಪೀಠ ನಿರ್ಧರಿಸಿತು.</p>.<p>ಕೇಂದ್ರ ಸರ್ಕಾರವು ಈ ಹಿಂದೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ತೆಗೆದುಕೊಂಡಿದ್ದ ನಿಲುವಿಗಿಂತ ಭಿನ್ನವಾದ ನಿಲುವು ಮತ್ತೊಂದು ಪ್ರಮಾಣಪತ್ರದಲ್ಲಿ ಇದೆ ಎಂಬ ವಿಚಾರವನ್ನು ಅರ್ಜಿದಾರರು ಗಮನಕ್ಕೆ ತಂದಿದ್ದಾರೆ ಎಂದು ಕೋರ್ಟ್ ಹೇಳಿತು. ಅಲ್ಪಸಂಖ್ಯಾತರು ಎಂದು ಘೋಷಿಸುವುದಕ್ಕೂ ಮುನ್ನ ಸಮಾಲೋಚನೆ ನಡೆಸಬೇಕಿದೆ ಎಂದು ಪ್ರಮಾಣಪತ್ರದಲ್ಲಿ ಕೇಂದ್ರ ಹೇಳಿದೆ. ಆದರೆ, ಈ ರೀತಿ ಭಿನ್ನ ನಿಲುವು ತೆಗೆದುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿರ್ಣಯ ತೆಗೆದುಕೊಳ್ಳುವುದು ಮುಖ್ಯ ಎಂದು ಪೀಠ ಹೇಳಿತು.</p>.<p>ಮುಂದಿನ ವಿಚಾರಣೆಯನ್ನು ಆಗಸ್ಟ್ 30ಕ್ಕೆ ನಿಗದಿಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>