ಹಿಂದೂಗಳು ಹಾಗೂ ಇತರೆ ಸಮುದಾಯದವರ ಸಂಖ್ಯೆ ಕಡಿಮೆ ಇದ್ದರೆ ಆ ರಾಜ್ಯದ ವ್ಯಾಪ್ತಿಯಲ್ಲಿ ಅವ
ರನ್ನು ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂದು ಮಾರ್ಚ್ 27ರಂದು ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಅಲ್ಪಸಂಖ್ಯಾತರು ಎಂದು ಘೋಷಿಸಿದರೆ ದೂರಗಾಮಿ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ, ವ್ಯಾಪಕ ಸಮಾಲೋಚನೆ ಅಗತ್ಯ ಎಂದು ಕೇಂದ್ರ ಸೋಮವಾರ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೇಳಿತ್ತು.