ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆ ನಡೆಯುತ್ತಿದೆ, ಬಂಡಾಯ ಶಾಸಕರು ಶಿವಸೇನಾದಲ್ಲೇ ಇರಲಿದ್ದಾರೆ: ರಾವುತ್

ಅಕ್ಷರ ಗಾತ್ರ

ಮುಂಬೈ:ಬಂಡಾಯ ಶಾಸಕರ ಜತೆ ಮಾತುಕತೆ ನಡೆಯುತ್ತಿದ್ದು, ಅವರೆಲ್ಲ ಶಿವಸೇನಾದಲ್ಲೇ ಇರಲಿದ್ದಾರೆ ಎಂದು ಪಕ್ಷದ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

ನಮ್ಮ ಪಕ್ಷವು ಹೋರಾಟದ ಹಿನ್ನೆಲೆಯಲ್ಲಿ ರಚನೆಯಾಗಿದೆ. ನಾವು ಸತತ ಹೋರಾಟ ಮಾಡಲಿದ್ದೇವೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು. ಆದರೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಏಕನಾಥ್ ಶಿಂಧೆ ನಮ್ಮ ಪಕ್ಷದ ಅತಿ ಹಳೆಯ ಸದಸ್ಯ. ಅವರು ನಮ್ಮ ಸ್ನೇಹಿತರು. ನಾವು ದಶಕಗಳಿಂದ ಜತೆಯಾಗಿ ಕೆಲಸ ಮಾಡಿದ್ದೇವೆ. ಅಷ್ಟು ಸುಲಭವಾಗಿ ಬೇರೆಯಾಗುವುದು ಅವರಿಗೂ ನಮಗೂ ಸುಲಭವಲ್ಲ. ಅವರ ಜತೆ ಇಂದು ಬೆಳಿಗ್ಗೆ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದ್ದೇನೆ. ಪಕ್ಷದ ಅಧ್ಯಕ್ಷರಿಗೂ ಈ ಬಗ್ಗೆ ತಿಳಿಸಲಾಗಿದೆ ಎಂದು ರಾವುತ್ ತಿಳಿಸಿದ್ದಾರೆ.

ಈ ಮಧ್ಯೆ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸಕ್ಕೆ ಮಹಾರಾಷ್ಟ್ರ ಸಚಿವ ಬಾಳಾಸಾಹೇಬ್ ಪಾಟೀಲ್ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT