ಈ ಸಂದರ್ಭದಲ್ಲಿ ದಿವಂಗತ ತಂದೆ ಶ್ರೀನಿವಾಸನ್ ಅವರನ್ನು ಸ್ಮರಿಸಿರುವ ಕಮಲ್ ಹಾಸನ್, 'ನಾನು ಐಎಎಸ್ ಅಧಿಕಾರಿಯಾಗಬೇಕೆಂಬುದು ನನ್ನ ತಂದೆಯ ಕನಸಾಗಿತ್ತು. ಅವರ ಕನಸನ್ನು ನನಸಾಗಿಸಲು ಸಾಧ್ಯವಾಗದಿದ್ದರೂ ನನ್ನ ಪಕ್ಷವು ಅನೇಕ ಐಎಎಸ್ ಅಧಿಕಾರಿಗಳನ್ನು ಒಳಗೊಂಡಿದೆ. ಇದು ನನಗೆ ಹೆಮ್ಮೆಯ ಕ್ಷಣವಾಗಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.