ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಷೇರುಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.
ಐಪಿಒ ಕುರಿತಂತೆ ಎಲ್ಐಸಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಅರ್ಜಿ ಸಲ್ಲಿಸಿದೆ. ಶೇಕಡ 5ರಷ್ಟು ಷೇರುಗಳನ್ನು ಮಾರಾಟ ಮಾಡಲು ಎಲ್ಐಸಿ ನಿರ್ಧರಿಸಿದೆ.
ಈ ನಡೆ ಖಾಸಗೀಕರಣದತ್ತ ಹೆಜ್ಜೆಯಾಗಿದೆ. ಕೇಂದ್ರದ ನಿರ್ಧಾರ ಸರಿಯಲ್ಲ. ಸರ್ಕಾರ ಇಂತಹ ಸಂಸ್ಥೆಗಳನ್ನು ಬೆಳೆಸಬೇಕು, ಅದರ ಬದಲು ಹಂತಹಂತವಾಗಿ ಮಾರಾಟ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
LIC over the years has catered to the needs of crores of Indians, earned their trust and has provided social security with its efficient functioning. (1/3) pic.twitter.com/bctqaaY7CP
ಎಲ್ಐಸಿ ಹಲವು ವರ್ಷಗಳಿಂದ ಜನರ ಅಗತ್ಯತೆಗಳನ್ನು ಪೂರೈಸುತ್ತಾ ಬಂದಿದೆ. ಜನರ ನಂಬಿಕೆ ಗಳಿಸಿ, ಸಾಮಾಜಿಕ ಭದ್ರತೆ ಒದಗಿಸಿದೆ. ಅಂತಹ ಸಂಸ್ಥೆಯನ್ನು ಸರ್ಕಾರ ಈಗ ಹಾಳುಗೆಡವಲು ಹೊರಟಿದೆ ಎಂದು ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.