<p><strong>ಚೆನ್ನೈ:</strong> ‘ನಿವಾರ್’ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಬುಧವಾರ ಚೆಂಬರಂಬಕ್ಕಂ ಸರೋವರ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.</p>.<p>ಈ ಮಧ್ಯೆ, ಪರಿಹಾರ ಕೇಂದ್ರಗಳಲ್ಲಿ ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸಲು ಒತ್ತುನೀಡಲಾಗುವುದು ಎಂದು ತಮಿಳುನಾಡು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತುಲ್ಯಾ ಮಿಶ್ರಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cyclone-nivar-flights-several-train-services-affected-as-heavy-rains-continue-to-lash-chennai-781827.html" itemprop="url">‘ನಿವಾರ್’ ಚಂಡಮಾರುತ: ಚೆನ್ನೈನಲ್ಲಿ ಭಾರಿ ಮಳೆ, ವಿಮಾನ - ರೈಲು ಸಂಚಾರಕ್ಕೆ ಅಡ್ಡಿ</a></p>.<p>‘ಪರಿಹಾರ ಕೇಂದ್ರಗಳಲ್ಲಿ ಮಾಸ್ಕ್ಗಳು, ಸ್ಯಾನಿಟೈಸರ್ಗಳು ಲಭ್ಯವಿವೆ. ಪ್ರತಿ ವ್ಯಕ್ತಿಗೆ 27 ವಸ್ತುಗಳಂತೆ ಅಗತ್ಯವಸ್ತುಗಳು ಸಿದ್ಧವಿವೆ. ಇದರಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಅಗತ್ಯವಸ್ತುಗಳ ಕಿಟ್ಗಳು ಸಹ ಇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಈಶಾನ್ಯ ಮುಂಗಾರಿನ ಬಗ್ಗೆ ನಾವು ಯಾವಾಗಲೂ ಜಾಗರೂಕರಾಗಿರಬೇಕಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಇತರ ಅಧಿಕಾರಿಗಳು ಸಭೆ ನಡೆಸಿದ್ದು, ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cyclone-nivar-tamil-nadu-govt-has-shifted-24166-people-987-relief-centres-781786.html" itemprop="url" target="_blank">‘ನಿವಾರ್’ ಚಂಡಮಾರುತ: 24 ಸಾವಿರ ಜನ ಸ್ಥಳಾಂತರ, 987 ನಿರಾಶ್ರಿತರ ಶಿಬಿರಗಳು</a></p>.<p>ಚಂಡಮಾರುತದ ಸಂದರ್ಭದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತಮಿಳುನಾಡು ಮತ್ತು ಪುದುಚೇರಿ ಸರ್ಕಾರದ ಜತೆ ಕೈಜೋಡಿಸಲು ಸೇನೆಯೂ ಸನ್ನದ್ಧವಾಗಿದೆ ಎಂದು ಸೇನೆಯ ದಕ್ಷಿಣ ಕಮಾಂಡ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ನಿವಾರ್’ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಬುಧವಾರ ಚೆಂಬರಂಬಕ್ಕಂ ಸರೋವರ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.</p>.<p>ಈ ಮಧ್ಯೆ, ಪರಿಹಾರ ಕೇಂದ್ರಗಳಲ್ಲಿ ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸಲು ಒತ್ತುನೀಡಲಾಗುವುದು ಎಂದು ತಮಿಳುನಾಡು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತುಲ್ಯಾ ಮಿಶ್ರಾ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cyclone-nivar-flights-several-train-services-affected-as-heavy-rains-continue-to-lash-chennai-781827.html" itemprop="url">‘ನಿವಾರ್’ ಚಂಡಮಾರುತ: ಚೆನ್ನೈನಲ್ಲಿ ಭಾರಿ ಮಳೆ, ವಿಮಾನ - ರೈಲು ಸಂಚಾರಕ್ಕೆ ಅಡ್ಡಿ</a></p>.<p>‘ಪರಿಹಾರ ಕೇಂದ್ರಗಳಲ್ಲಿ ಮಾಸ್ಕ್ಗಳು, ಸ್ಯಾನಿಟೈಸರ್ಗಳು ಲಭ್ಯವಿವೆ. ಪ್ರತಿ ವ್ಯಕ್ತಿಗೆ 27 ವಸ್ತುಗಳಂತೆ ಅಗತ್ಯವಸ್ತುಗಳು ಸಿದ್ಧವಿವೆ. ಇದರಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಅಗತ್ಯವಸ್ತುಗಳ ಕಿಟ್ಗಳು ಸಹ ಇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಈಶಾನ್ಯ ಮುಂಗಾರಿನ ಬಗ್ಗೆ ನಾವು ಯಾವಾಗಲೂ ಜಾಗರೂಕರಾಗಿರಬೇಕಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಇತರ ಅಧಿಕಾರಿಗಳು ಸಭೆ ನಡೆಸಿದ್ದು, ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cyclone-nivar-tamil-nadu-govt-has-shifted-24166-people-987-relief-centres-781786.html" itemprop="url" target="_blank">‘ನಿವಾರ್’ ಚಂಡಮಾರುತ: 24 ಸಾವಿರ ಜನ ಸ್ಥಳಾಂತರ, 987 ನಿರಾಶ್ರಿತರ ಶಿಬಿರಗಳು</a></p>.<p>ಚಂಡಮಾರುತದ ಸಂದರ್ಭದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತಮಿಳುನಾಡು ಮತ್ತು ಪುದುಚೇರಿ ಸರ್ಕಾರದ ಜತೆ ಕೈಜೋಡಿಸಲು ಸೇನೆಯೂ ಸನ್ನದ್ಧವಾಗಿದೆ ಎಂದು ಸೇನೆಯ ದಕ್ಷಿಣ ಕಮಾಂಡ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>