ಚೆನ್ನೈ: ಜಿಲ್ಲೆಯ ಸತ್ತೂರು ಬಳಿ ಇರುವ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಅಚ್ಚಂಕುಲಂ ಗ್ರಾಮದಲ್ಲಿ ಈ ಕಾರ್ಖಾನೆ ಇದೆ. ಪಟಾಕಿಗಳನ್ನು ತಯಾರಿಸಲು ಕೆಲವು ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಸ್ಫೋಟ ಸಂಭವಿಸಿದೆ. 30 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#UPDATE Tamil Nadu:Death toll rises to 19 in the fire incident that took place at firecracker factory in Virudhunagar y'day
PM & CM announced ex-gratia of Rs 2 Lakhs & Rs 3 Lakhs each respectively to kin of deceased; Rs 50,000 & Rs 1 Lakh each respectively for critically injured
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ತಲಾ ₹ 3 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಸ್ಫೋಟ ಕುರಿತು ತನಿಖೆಗೂ ಅವರು ಆದೇಶಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ... ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.