ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಎಸ್.ಟಿ.ಸೋಮಶೇಖರ್

Last Updated 4 ಏಪ್ರಿಲ್ 2021, 19:31 IST
ಅಕ್ಷರ ಗಾತ್ರ

ಊಟಿ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮಿಳುನಾಡಿನ ಉದಕಮಂಡಲ (ಊಟಿ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೋಜರಾಜನ್ ಪರ 9 ದಿನಗಳ ಕಾಲ ಪ್ರಚಾರ ನಡೆಸಿದ್ದಾರೆ.

ಉದಕಮಂಡಲ ಬಿಜೆಪಿ ಚುನಾವಣಾ ಉಸ್ತುವಾರಿಯೂ ಆಗಿರುವ ಸೋಮಶೇಖರ್ ಅವರು, ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ–ಎಐಎಡಿಎಂಕೆ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರುಬಹಿರಂಗ ಪ್ರಚಾರ ಅಂತ್ಯಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೈಲ್ವೆ ಮಾರ್ಗ ಪ್ರಸ್ತಾವ: ‘ಊಟಿ–ನಂಜನಗೂಡು ರೈಲ್ವೆ ಮಾರ್ಗ ನಿರ್ಮಾಣದ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಈ ಸಂಬಂಧ ರೈಲ್ವೆ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರ ಬರೆದು ಶಿಫಾರಸು ಮಾಡಲು ಒತ್ತಾಯಿಸುತ್ತೇನೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT