ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ತಮಿಳುನಾಡಲ್ಲಿ ಅನಾಥ ಮಕ್ಕಳಿಗೆ ₹ 5 ಲಕ್ಷ ನೆರವು, ಉಚಿತ ಶಿಕ್ಷಣ

Last Updated 29 ಮೇ 2021, 11:58 IST
ಅಕ್ಷರ ಗಾತ್ರ

ಚೆನ್ನೈ: ಕೋವಿಡ್‌ನಿಂದ ತಂದೆ–ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ₹ 5 ಲಕ್ಷ ನೆರವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪ್ರಕಟಿಸಿದ್ದಾರೆ. ಅಲ್ಲದೆ, ಪದವಿ ಹಂತದವರೆಗೂ ಅವರ ಶಿಕ್ಷಣದ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಇಂಥ ಮಕ್ಕಳನ್ನು ಗುರುತಿಸಿ, ಅಗತ್ಯ ನೆರವು ಒದಗಿಸುವ ಸಲುವಾಗಿ ಈಗಾಗಲೇ ಜಿಲ್ಲಾ ಹಂತದಲ್ಲಿ ಈಗಾಗಲೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಶನಿವಾರ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕೋವಿಡ್‌ ಸೋಂಕಿನಿಂದ ತಂದೆ ಅಥವಾ ತಾಯಿ ಕಳೆದುಕೊಂಡಿದ್ದ ಸಂದರ್ಭದಲ್ಲಿ ಮಗುವಿನ ಹೆಸರಲ್ಲಿ ₹ 3 ಲಕ್ಷ ಠೇವಣಿ ಇಡಲಾಗುವುದು. ಇಬ್ಬರನ್ನು ಕಳೆದುಕೊಂಡಿದ್ದಲ್ಲಿ ಪೋಷಕರ ಸುಪರ್ದಿಯಲ್ಲಿ ಬೆಳೆಯಲು ಮಗುವಿಗೆ 18 ವರ್ಷ ಆಗುವವರೆಗೂ ಮಾಸಿಕ ₹ 3 ಸಾವಿರ ಭತ್ಯೆ ನೀಡಲಾಗುವುದು ಎಂದು ಹೇಳಿಕೆಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT