ಮೇಕೆದಾಟು ಯೋಜನೆಗೆ ಹಣ ಮಂಜೂರು: ಕರ್ನಾಟಕ ನಿರ್ಧಾರದ ವಿರುದ್ಧ ತಮಿಳುನಾಡು ನಿರ್ಣಯ

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆ ‘ಏಕಪಕ್ಷೀಯ’ವಾದದ್ದು ಎಂದು ಖಂಡಿಸಿರುವ ತಮಿಳುನಾಡು, ಈ ಕುರಿತು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಅಲ್ಲದೆ ಈ ಯೋಜನೆ ಕುರಿತ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಕೇಂದ್ರವನ್ನು ಆಗ್ರಹಿಸಿದೆ.
ಈ ಸಂಬಂಧ ನಿರ್ಣಯ ಮಂಡಿಸಿದ ಜಲಸಂಪನ್ಮೂಲ ಸಚಿವ ದೊರೈಮುರುಗನ್, ದಶಕಗಳಿಂದ ನೆರೆಯ ರಾಜ್ಯವು ತಮಿಳುನಾಡಿಗೆ ಸಮಸ್ಯೆ ಉಂಟು ಮಾಡುತ್ತಿದೆ. ಈಗ ಮೇಕೆದಾಟು ಬಳಿ ಅಣೆಕಟ್ಟು (ಸಮತೋಲನ ಜಲಾಶಯ) ಯೋಜನೆಯ ನಿರ್ಧಾರ ಕೈಗೊಳ್ಳುವ ಮೂಲಕ ಕರ್ನಾಟಕವು ಸುಪ್ರೀಂ ಕೋರ್ಟ್ ತೀರ್ಪಿಗೆ ಅಗೌರವ ತೋರಿದೆ ಎಂದು ಹೇಳಿದರು.
‘ದೇಶದಲ್ಲಿ ಸಂಯುಕ್ತ ವ್ಯವಸ್ಥೆ ಎಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸುವ ಮತ್ತು ತಮಿಳುನಾಡಿಗೆ ಪೂರ್ಣ ಪ್ರಮಾಣದ ನೀರನ್ನು ಹರಿಸದ ರಾಜ್ಯ ಇಲ್ಲಿದೆ. ನಾವು ಈಗ ಒಗ್ಗಟ್ಟಾಗಿ ಹೋರಾಟ ಮಾಡದಿದ್ದರೆ ನಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತೇವೆ. ಭವಿಷ್ಯದ ಪೀಳಿಗೆ ನಮ್ಮನ್ನು ಶಪಿಸಬಹುದು’ ಎಂದ ಅವರು, ಪಕ್ಷಭೇದ ಮರೆತು ನಿರ್ಣಯವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Tamil Nadu Minister Durai Murugan brings resolution in Assembly opposing Karnataka's decision to allot money for constructing a reservoir in Mekedatu across Cauvery river without permission; appeals the Centre not to grant permission to Karnataka govt to construct Mekedatu dam pic.twitter.com/aRzzNucEpF
— ANI (@ANI) March 21, 2022
ಇದನ್ನೂ ಓದಿ.. ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.