ನವದೆಹಲಿ/ಚೆನ್ನೈ: ತಮಿಳುನಾಡಿನ ಸರ್ವಪಕ್ಷ ನಿಯೋಗವು ಮೇಕೆದಾಟು ಯೋಜನೆ ಕುರಿತು ಕೇಂದ್ರ ಜಲಶಕ್ತಿ ಇಲಾಖೆ ಸಚಿವರನ್ನು ಭೇಟಿ ಮಾಡಿ ಚರ್ಚಿಸಿತು. ‘ಯೋಜನೆ ಕುರಿತು ಕರ್ನಾಟಕ ಸರ್ಕಾರ ಸಿದ್ಧಪಡಿಸಿದ ವಿವರವಾದ ಯೋಜನಾ ವರದಿ (ಡಿಪಿಆರ್) ಏಕಪಕ್ಷೀಯವಾಗಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ’ ಎಂದು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿಳಿಸಿದ್ದಾರೆ ಎಂದು ನಿಯೋಗ ಹೇಳಿಕೊಂಡಿದೆ.