ಚೆನ್ನೈ: ಕೂರುವುದಕ್ಕೆ ಕುರ್ಚಿ ತರಲು ವಿಳಂಬ ಮಾಡಿದ ಡಿಎಂಕೆ ಪಕ್ಷದ ಕಾರ್ಯಕರ್ತರ ಮೇಲೆ ತಮಿಳುನಾಡು ಸಚಿವ ಎಸ್.ಎಂ. ನಾಸರ್ ಕಲ್ಲು ತೂರಾಟ ನಡೆಸಿದ್ದಾರೆ.
ತಿರುವಳ್ಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಚಿವರ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕಳೆದ ವರ್ಷ, ನಾಸರ್ ಅವರು ಕೇಂದ್ರ ಸರ್ಕಾರ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿದೆ. ಹಾಗಾಗಿ ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಹಾಲನ್ನು ಜಿಎಸ್ಟಿಯಿಂದ ಹೊರಗಿಡುವ ಬಗ್ಗೆ ಡಿಎಂಕೆ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಟೀಕಿಸಿದ್ದರು.
#WATCH | Tamil Nadu Minister SM Nasar throws a stone at party workers in Tiruvallur for delaying in bringing chairs for him to sit pic.twitter.com/Q3f52Zjp7F