<p><strong>ಚೆನ್ನೈ:</strong>ಭಾರತೀಯ ಚುನಾವಣೆ ಆಯೋಗವು ತಿರುಚನಾಪಳ್ಳಿಯಜಿಲ್ಲಾಧಿಕಾರಿ, ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಪಿ) ಹಾಗೂ ಸಬ್-ಕಲೆಕ್ಟರ್ ಅವರನ್ನು ಚುನಾವಣೇತರ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ಚುನಾವಣಾ ಅಧಿಕಾರಿಗಳು ಜಿಲ್ಲೆಯಲ್ಲಿ ಗುರುವಾರ ₹ 1 ಕೋಟಿ ವಶಕ್ಕೆ ಪಡೆದಿದ್ದರು. ಅದಾದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಅಧಿಕಾರಿಗಳ ವರ್ಗಾವಣೆ ಸಂಬಂಧ ರಾಜ್ಯದಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗವು, ವಿಶೇಷ ವೀಕ್ಷಕರ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.ತಿರುಚನಾಪಳ್ಳಿ ಎಸ್ಪಿ ಪಿ.ರಾಜನ್, ಜಿಲ್ಲಾಧಿಕಾರಿ ಎಸ್.ಶಿವರಾಸು ಮತ್ತು ಶ್ರೀರಂಗಂನ ಉಪ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರನ್ನು ಚುನಾವಣೇತರ ಹುದ್ದೆಗಳಿಗೆ ವರ್ಗಾಯಿಸಲು ಅನುಮೋದನೆ ನೀಡಲಾಗಿದೆ ಎಂದೂ ಹೇಳಿದೆ.</p>.<p>ರಾಜನ್ ಅವರ ಜಾಗಕ್ಕೆ ಎ. ಮಯಿಲ್ವಗನನ್ ಹಾಗೂ ಶಿವರಾಸು ಸ್ಥಾನಕ್ಕೆ ಎಸ್. ದಿವ್ಯದರ್ಶಿನಿ ಅವರನ್ನು ನೇಮಿಸಲಾಗಿದೆ.</p>.<p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong>ಭಾರತೀಯ ಚುನಾವಣೆ ಆಯೋಗವು ತಿರುಚನಾಪಳ್ಳಿಯಜಿಲ್ಲಾಧಿಕಾರಿ, ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಪಿ) ಹಾಗೂ ಸಬ್-ಕಲೆಕ್ಟರ್ ಅವರನ್ನು ಚುನಾವಣೇತರ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ಚುನಾವಣಾ ಅಧಿಕಾರಿಗಳು ಜಿಲ್ಲೆಯಲ್ಲಿ ಗುರುವಾರ ₹ 1 ಕೋಟಿ ವಶಕ್ಕೆ ಪಡೆದಿದ್ದರು. ಅದಾದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಅಧಿಕಾರಿಗಳ ವರ್ಗಾವಣೆ ಸಂಬಂಧ ರಾಜ್ಯದಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗವು, ವಿಶೇಷ ವೀಕ್ಷಕರ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.ತಿರುಚನಾಪಳ್ಳಿ ಎಸ್ಪಿ ಪಿ.ರಾಜನ್, ಜಿಲ್ಲಾಧಿಕಾರಿ ಎಸ್.ಶಿವರಾಸು ಮತ್ತು ಶ್ರೀರಂಗಂನ ಉಪ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರನ್ನು ಚುನಾವಣೇತರ ಹುದ್ದೆಗಳಿಗೆ ವರ್ಗಾಯಿಸಲು ಅನುಮೋದನೆ ನೀಡಲಾಗಿದೆ ಎಂದೂ ಹೇಳಿದೆ.</p>.<p>ರಾಜನ್ ಅವರ ಜಾಗಕ್ಕೆ ಎ. ಮಯಿಲ್ವಗನನ್ ಹಾಗೂ ಶಿವರಾಸು ಸ್ಥಾನಕ್ಕೆ ಎಸ್. ದಿವ್ಯದರ್ಶಿನಿ ಅವರನ್ನು ನೇಮಿಸಲಾಗಿದೆ.</p>.<p>234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>