ಚೆನ್ನೈಯಲ್ಲಿ ಭಾರಿ ಮಳೆ, ಹಲವೆಡೆ ನೆರೆ: ಪುದುಚೇರಿಯಲ್ಲಿ ಶಾಲೆ–ಕಾಲೇಜುಗಳಿಗೆ ರಜೆ

ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರವೂ ಭಾರಿ ಮಳೆ ಮುಂದುವರಿದಿದ್ದು, ಚೆನ್ನೈಯ ಹಲವೆಡೆ ನೆರೆ ಉಂಟಾಗಿದೆ.
ನಗರದ ಹಲವೆಡೆ ರಸ್ತೆ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಚಾರಕ್ಕೂ ತೊಡಕಾಗಿದೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಓದಿ: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ: ಯೆಲ್ಲೊ ಅಲರ್ಟ್
ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊರತ್ತೂರು ಪ್ರದೇಶ ಬಹುತೇಕ ಜಲಾವೃತಗೊಂಡಿದೆ. ನವೆಂಬರ್ 9ರಿಂದ 11ರ ವರೆಗೆ ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
#WATCH | Tamil Nadu: Water logging in parts of Chennai, following heavy rainfall here, affects normal life. Visuals from Korattur area this morning.
Heavy rainfall expected in coastal areas of Andhra Pradesh and Tamil Nadu from 9-11th Nov due to northeast monsoon, as per IMD. pic.twitter.com/E5ZaWH3KCM
— ANI (@ANI) November 8, 2021
ಕೊಯಮತ್ತೂರಿನಲ್ಲಿ ಇಂದು (ಸೋಮವಾರ) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿಕೂಲ ಪರಿಸ್ಥಿತಿಯ ಕಾರಣ ಪುದುಚೇರಿ ಮತ್ತು ಕರೈಕಲ್ಗಳಲ್ಲಿ ಶಾಲೆ–ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.
Tamil Nadu: Water logging in parts of Chennai, following heavy rainfall here, affects normal life in the city.
Visuals from Korattur area in the city.
Heavy rainfall expected in coastal areas of Andhra Pradesh and Tamil Nadu from 9-11th Nov due to northeast monsoon, as per IMD pic.twitter.com/Oe2vjUvgrY
— ANI (@ANI) November 8, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.