2018ರಲ್ಲಿ ಕಂಪನಿಯು ಪರಿಸರ ಮಾಲಿನ್ಯ ಉಂಟುಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿತ್ತು. ಆಗ ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ 13 ಮಂದಿ ಮೃತಪಟ್ಟಿದ್ದರು. ಬಳಿಕ ತಮಿಳುನಾಡು ಸರ್ಕಾರ ಕಂಪನಿಯನ್ನು ಮುಚ್ಚಿಸಿತ್ತು. ಈಚೆಗೆ ಆಮ್ಲಜನಕಕ್ಕೆ ತೀವ್ರ ಕೊರತೆ ಉಂಟಾದ್ದರಿಂದ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ನಾಲ್ಕು ತಿಂಗಳ ಅವಧಿಗೆ ಕಂಪನಿಯನ್ನು ಪುನರಾರಂಭಿಸಿ, ಆಮ್ಲಜನಕ ಉತ್ಪಾದನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.