ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿ ಟ್ವೀಟಿಸಿರುವ ಅವರು, ‘ಪ್ರೀತಿಯ ದೀದಿ ಅವರು ನನಗೆ ದೂರವಾಣಿ ಕರೆ ಮಾಡಿದ್ದರು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರದ ದುರುಪಯೋಗದ ಕುರಿತು ಚರ್ಚಿಸಿದರು. ಈ ಬಗ್ಗೆ ತಮ್ಮ ಕಳವಳ ಮತ್ತು ಬೇಸರವನ್ನು ಹಂಚಿಕೊಂಡಿದ್ದಾರೆ. ಅವರು ಪ್ರತಿಪಕ್ಷದ ಸಿಎಂಗಳ ಸಭೆಗೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.