ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರಿಂದ ಅಧಿಕಾರ ದುರುಪಯೋಗ ಆರೋಪ: ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್ ಸಭೆ

Last Updated 14 ಫೆಬ್ರುವರಿ 2022, 1:38 IST
ಅಕ್ಷರ ಗಾತ್ರ

ಚೆನ್ನೈ: ರಾಜ್ಯಪಾಲರ ಅಧಿಕಾರ ದುರುಪಯೋಗ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಶೀಘ್ರದಲ್ಲೇ ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್‌ ಮಾಡಿ ಟ್ವೀಟಿಸಿರುವ ಅವರು, ‘ಪ್ರೀತಿಯ ದೀದಿ ಅವರು ನನಗೆ ದೂರವಾಣಿ ಕರೆ ಮಾಡಿದ್ದರು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರದ ದುರುಪಯೋಗದ ಕುರಿತು ಚರ್ಚಿಸಿದರು. ಈ ಬಗ್ಗೆ ತಮ್ಮ ಕಳವಳ ಮತ್ತು ಬೇಸರವನ್ನು ಹಂಚಿಕೊಂಡಿದ್ದಾರೆ. ಅವರು ಪ್ರತಿಪಕ್ಷದ ಸಿಎಂಗಳ ಸಭೆಗೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

'ರಾಜ್ಯದ ಸ್ವಾಯತ್ತತೆಯನ್ನು ಎತ್ತಿಹಿಡಿಯಲು ಡಿಎಂಕೆ ಬದ್ಧವಾಗಿದೆ. ಈ ಬಗ್ಗೆ ನಾನು ಅವರಿಗೆ ಭರವಸೆ ನೀಡಿದ್ದೇನೆ. ದೆಹಲಿಯಲ್ಲಿ ಶೀಘ್ರದಲ್ಲೇ ಪ್ರತಿಪಕ್ಷದ ಸಿಎಂಗಳ ಸಭೆ ನಡೆಯಲಿದೆ’ ಎಂದು ಸ್ಟಾಲಿನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT