ಪುದುಚೇರಿ: ತೆಲಂಗಾಣದ ರಾಜ್ಯಪಾಲೆ ಡಾ. ತಮಿಳಿಸೈ ಸೌಂದರರಾಜನ್ ಅವರು ಗುರುವಾರ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದ್ದಾರೆ.
ಫೆಬ್ರುವರಿ 16ರಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಡಾ. ಕಿರಣ್ ಬೇಡಿ ಅವರನ್ನು ಪದಚ್ಯುತಿಗೊಳಿಸಲಾಗಿತ್ತು.
ಬಳಿಕ ತಮಿಳಿಸೈ ಸೌಂದರರಾಜನ್ ಅವರು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಹೆಚ್ಚುವರಿ ಜವಾಬ್ದಾರಿ ವಹಿಸುವಂತೆ ರಾಷ್ಟ್ರಪತಿ ಭವನ ಸೂಚಿಸಿತ್ತು.
Puducherry: Tamilisai Soundararajan sworn in as Lieutenant Governor of Puducherry, an additional charge as she already holds the position of Telangana Governor. CM V Narayanasamy was also present at the ceremony
ಪುದುಚೇರಿಯ ರಾಜ ನಿವಾಸದಲ್ಲಿ ಗುರುವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ತಮಿಳಿಸೈಸೌಂದರರಾಜನ್ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಪುದುಚೇರಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಮಿಳು ಭಾಷೆ ಮಾತನಾಡುವ ವ್ಯಕ್ತಿಯೊಬ್ಬರು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಳ್ಳುತ್ತಿದ್ದಾರೆ. ಈ ಮೂಲಕ ತಮಿಳುಸಾಯಿ ಸೌಂದರರಾಜನ್ ವಿಶಿಷ್ಟ ದಾಖಲೆ ಬರೆದರು. ಅವರು ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷೆ ಕೂಡಾ ಆಗಿದ್ದಾರೆ.
Puducherry: Tamilisai Soundararajan formally takes additional charge as Lieutenant Governor of the Union Territory pic.twitter.com/GeG3VrnDxq
ಕಿರಣ್ ಬೇಡಿ ಅವರು 2016ರಿಂದಲೇ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ವಹಿಸಿದ್ದರು. ಆದರೆ ಪುದುಚೇರಿಯ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪ ಹಾಗೂ ಭಾರಿ ಪ್ರತಿಭಟನೆ ಎದುರಾಗಿತ್ತು.