ಚೆನ್ನೈ: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಶುಭಕೋರುವ ಸಲುವಾಗಿ ವೈಯಕ್ತಿಕವಾಗಿ ತಮ್ಮನ್ನು ಭೇಟಿಯಾಗುವುದು ಬೇಡ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಬುಧವಾರ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಸಂದೇಶ ಕಳುಹಿಸಿರುವ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಹೆಚ್ಚಾಗಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ತಮ್ಮನ್ನು ಭೇಟಿಯಾಗಿ ಶುಭ ಕೋರಲು ಬರುತ್ತಾರೆ. ಇದರಿಂದ ಜನಸಂದಣಿ ಉಂಟಾಗುತ್ತದೆ. ಅಲ್ಲದೆ, ಸೋಂಕು ಹರಡುವ ಸಾಧ್ಯತೆಯೂ ಹೆಚ್ಚಿರುತ್ತದೆ. ಅದಕ್ಕೆ ಅವಕಾಶ ಕೊಡುವುದು ಬೇಡ ಎನ್ನುವುದು ಸ್ಟಾಲಿನ್ ಅವರ ಉದ್ದೇಶವಾಗಿದೆ.