‘ಚಿತ್ರಕ್ಕೆ ಬಿಹಾರದಲ್ಲಿಯೂ ತೆರಿಗೆ ವಿನಾಯಿತಿ ನೀಡಬೇಕು ಎಂದು ಬಿಜೆಪಿಯು ನಿತೀಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿತ್ತು. ಹಲವು ಸಚಿವರು ಮತ್ತು ಶಾಸಕರು ಸರ್ಕಾರದ ದುಡ್ಡಿನಲ್ಲಿ ಸಿನಿಮಾ ವೀಕ್ಷಿಸಲು ಥಿಯೇಟರ್ಗೆ ಹೋಗಿದ್ದರು. ನಾಗರಿಕರಲ್ಲಿ ಭಯ ಹುಟ್ಟಿಸಲು ಉಗ್ರಗಾಮಿಗಳೇ ಈ ಚಿತ್ರ ನಿರ್ಮಾಣ ಮಾಡಿರಬಹುದು ಎಂದು ನಾನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.