<p><strong>ಕೊಚ್ಚಿ: </strong>ಕೇರಳದ ಕರಾವಳಿ ಭಾಗದಿಂದ ತೌಕ್ತೆ ಚಂಡಮಾರುತವು ದೂರ ಸರಿದಿದೆ. ಆದರೂ ರಾಜ್ಯದ ಹಲವು ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು ಹೆಚ್ಚಿದೆ.</p>.<p>ಎರ್ನಾಕುಳಂ, ಇಡುಕ್ಕಿ ಮತ್ತು ಮಲಪ್ಪುರಂನಲ್ಲಿ ಭಾರಿ ಅಥವಾ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಈ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>‘ಮಧ್ಯ ಕೇರಳದ ಜಿಲ್ಲೆಗಳ ಹಲವು ಅಣೆಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಪೆರಿಂಗಲ್ಕುತ್ತು ಅಣೆಕಟ್ಟಿನ ನೀರಿನ ಮಟ್ಟವು 419.41 ಮೀಟರ್ ಅನ್ನು ಮೀರಿದರೆ, ಅದರ ಗೇಟುಗಳನ್ನು ತೆರೆಯಲಾಗುವುದು’ ಎಂದು ತ್ರಿಶ್ಶೂರ್ ಜಿಲ್ಲಾಡಳಿತ ತಿಳಿಸಿದೆ.</p>.<p><strong>ಇದನ್ನೂ ಓದಿ–</strong> <a href="https://www.prajavani.net/district/uthara-kannada/tauktae-cyclone-destroyed-the-life-of-fisherman-and-as-well-as-beach-side-vendors-830946.html" target="_blank">ಮುರ್ಡೇಶ್ವರ: ವ್ಯಾಪಾರಿಗಳ ಬದುಕು ಕಸಿದ ಚಂಡಮಾರುತ</a></p>.<p>‘ಮಲಂಕಾರ ಮತ್ತು ಇಡುಕ್ಕಿ ಜಿಲ್ಲೆಯ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಹೆಚ್ಚಾದ್ದರಿಂದ ಅದರ ಗೇಟುಗಳನ್ನು ಭಾನುವಾರ ತೆರೆಯಲಾಗುವುದು. ತೊಡುಪುಳ, ಮುವಾಟ್ಟುಪುಳ ನದಿ ಮತ್ತು ಅದರ ಉಪನದಿಗಳ ಬಳಿ ವಾಸವಾಗಿರುವವರು ಜಾಗೂರುಕರಾಗಿರುವಂತೆ’ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.</p>.<p>‘ಕರಾವಳಿ ತೀರದಲ್ಲಿ ವಾಸಿಸುವ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ: </strong>ಕೇರಳದ ಕರಾವಳಿ ಭಾಗದಿಂದ ತೌಕ್ತೆ ಚಂಡಮಾರುತವು ದೂರ ಸರಿದಿದೆ. ಆದರೂ ರಾಜ್ಯದ ಹಲವು ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು ಹೆಚ್ಚಿದೆ.</p>.<p>ಎರ್ನಾಕುಳಂ, ಇಡುಕ್ಕಿ ಮತ್ತು ಮಲಪ್ಪುರಂನಲ್ಲಿ ಭಾರಿ ಅಥವಾ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಈ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>‘ಮಧ್ಯ ಕೇರಳದ ಜಿಲ್ಲೆಗಳ ಹಲವು ಅಣೆಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಪೆರಿಂಗಲ್ಕುತ್ತು ಅಣೆಕಟ್ಟಿನ ನೀರಿನ ಮಟ್ಟವು 419.41 ಮೀಟರ್ ಅನ್ನು ಮೀರಿದರೆ, ಅದರ ಗೇಟುಗಳನ್ನು ತೆರೆಯಲಾಗುವುದು’ ಎಂದು ತ್ರಿಶ್ಶೂರ್ ಜಿಲ್ಲಾಡಳಿತ ತಿಳಿಸಿದೆ.</p>.<p><strong>ಇದನ್ನೂ ಓದಿ–</strong> <a href="https://www.prajavani.net/district/uthara-kannada/tauktae-cyclone-destroyed-the-life-of-fisherman-and-as-well-as-beach-side-vendors-830946.html" target="_blank">ಮುರ್ಡೇಶ್ವರ: ವ್ಯಾಪಾರಿಗಳ ಬದುಕು ಕಸಿದ ಚಂಡಮಾರುತ</a></p>.<p>‘ಮಲಂಕಾರ ಮತ್ತು ಇಡುಕ್ಕಿ ಜಿಲ್ಲೆಯ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಹೆಚ್ಚಾದ್ದರಿಂದ ಅದರ ಗೇಟುಗಳನ್ನು ಭಾನುವಾರ ತೆರೆಯಲಾಗುವುದು. ತೊಡುಪುಳ, ಮುವಾಟ್ಟುಪುಳ ನದಿ ಮತ್ತು ಅದರ ಉಪನದಿಗಳ ಬಳಿ ವಾಸವಾಗಿರುವವರು ಜಾಗೂರುಕರಾಗಿರುವಂತೆ’ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.</p>.<p>‘ಕರಾವಳಿ ತೀರದಲ್ಲಿ ವಾಸಿಸುವ ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>