ಈ ನಡುವೆ, ಶಿವಕುಮಾರ್ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ್ದರೂ
ಬಹಿರಂಗಪಡಿಸದ ಆದಾಯದ ಪ್ರಮಾಣವನ್ನು ಅಂದಾಜು ಹಾಕಿದ ನಂತರ ಹೊಸ ವಿಚಾರಣೆ ನಡೆಸಲು ಇಲಾಖೆಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿತ್ತು. ಶಿವಕುಮಾರ್ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯು ಮೂರು ತೆರಿಗೆ ವಂಚನೆ ಪ್ರಕರಣಗಳನ್ನು ದಾಖಲಿಸಿತ್ತು. ಇದರೊಂದಿಗೆ, ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ಗೆ ದಾಳಿ ನಡೆಸಿದಾಗ ಡಿ.ಕೆ.ಶಿವಕುಮಾರ್ ಅವರು ತಮ್ಮ ಬಳಿ ಇದ್ದ ಚೀಟಿಯೊಂದನ್ನು ಹರಿದು ಹಾಕಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಐ.ಟಿ ಆರೋಪಿಸಿತ್ತು.