ಪಾಲಿಕೆ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಟಿಡಿಪಿ ನಾಯಕರು, ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತಿರುಪತಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೈದರಾಬಾದ್ನಿಂದ ತಿರುಪತಿಗೆ ವಿಮಾನದಲ್ಲಿ ಆಗಮಿಸಿದ್ದ ನಾಯ್ಡು ಅವರನ್ನು ಪೊಲೀಸರು ವಿಮಾನ ನಿಲ್ದಾಣದಲ್ಲೇ ತಡೆದರು. ಪೊಲೀಸರ ಕ್ರಮ ವಿರೋಧಿಸಿ, ವಿಮಾನ ನಿಲ್ದಾಣದಲ್ಲೇ ನಾಯ್ಡು ಪ್ರತಿಭಟನೆ ನಡೆಸಲು ಮುಂದಾದರು.